Breaking
12 Jan 2026, Mon

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ವೀಡಿಯೋ ಇಲ್ಲಿ ವೀಕ್ಷಿಸಿ👆

ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಟಾ ವರ್ಧಂತೋತ್ಸವ ಧಾರ್ಮಿಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇತ್ತೀಚೆಗೆ ಭಾರತ ದೇಶದಲ್ಲಿ ದೊಡ್ಡ ಕ್ರಾಂತಿಯಂತಾದ ಮಹಾನ್ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ, ಯಮುನಾ, ಸರಸ್ವತಿ ಸ್ನಾನ ಮಾಡುವುದರೊಂದಿಗೆ ಋಷಿ ಮುನಿಗಳ ಶಕ್ತಿಯುತ ಪುರುಷರಾಗಿದ್ದಾರೆ ಅವರ ದರ್ಶನ ಪಡೆದು ಪುಣ್ಯವಂತರಾಗುತ್ತಾರೆಂಬ ನಂಬಿಕೆಯಿದ್ದು ಹಲವರು ಈ ಪುಣ್ಯ ಕಾರ್ಯಕ್ಕೆ ಭಾಗವಹಿಸಲಾಗಿಲ್ಲ ಎಂದು ಬೇಸರ ಪಡುವ ಅಗತ್ಯವಿಲ್ಲ. ತಂದೆ-ತಾಯಿಯರ ಪಾದ ಪೂಜೆ ಮಾಡಿ ಪಾದ ತೊಳೆದ ಪಾದೋದಕವನ್ನು ತಲೆಯ ಮೇಲೆ ಹಾಕಿಕೊಂಡರೆ ಸಾಕು ಹತ್ತು ಪಟ್ಟು ಪುಣ್ಯ ಲಭಿಸುವುದೆಂದು ಹೇಳಿದ ಶ್ರೀಗಳು, ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಶಿಕ್ಷಣವನ್ನು ಕೊಡಿಸಿ ಸುಸಂಸ್ಕೃತ ಸಮಾಜವನ್ನಾಗಿಸುವ ಕಾರ್ಯವನ್ನು ತಂದೆ ತಾಯಂದಿರು ಮಾಡಬೇಕಾಗಿದೆ ಎಂದರು.

ಧಾರ್ಮಿಕ ಕೇಂದ್ರಗಳಿಂದ ಶಾಂತಿ ನೆಮ್ಮದಿ ಪಡೆಯಲು ಸಾಧ್ಯವೆಂದ ಶ್ರೀಗಳು ಜಾತಿ ಭೇದ ಭಾವನೆ ಬೆಳೆಸದೆ ಚಾಡಿಮಾತಿನಿಂದ ಮನೆ ಒಡೆಯುವುದು ಯಾರಿಗೂ ಶೋಭೆ ತರುವುದಿಲ್ಲ. ದೇವಸ್ಥಾನ, ಮಠ-ಮಂದಿರಗಳಿಗೆ ಹೋಗಿ ಭಕ್ತಿಯಿಂದ ಭಗವಂತನ ನೆನೆದರೆ ಸಾಕು ಬದುಕಿನಲ್ಲಿ ಶಾಂತಿ ನೆಮ್ಮದಿಯಿಂದಿರಲು ಸಾಧ್ಯವೆಂದರು.

ಧಾರ್ಮಿಕ ಸಭೆಯಲ್ಲಿ ಕಲಾನಾಥೇಶ್ವರ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ನಾಗಭೂಷಣ, ಕಾರ್ಯದರ್ಶಿ ಮಂಜುನಾಥ, ಚೇತನಕುಮಾರ್ ಹಾಗೂ ಕಲಾನಾಥೇಶ್ವರ ಮಹಿಳಾ ಭಜನಾ ತಂಡದವರು ಹಾಗೂ ಕಾರಗೋಡು, ಬೆಳಕೋಡು, ಕರಡಿಗ ಕಣಬಂದೂರು, ಮೂಗುಡ್ತಿ, ವರನಹೊಂಡ ಸುತ್ತುಮುತ್ತಲಿನ ಭಕ್ತ ಸಮೂಹ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಪುರೋಹಿತ ಬಳಗದವರು ಕಲಾನಾಥೇಶ್ವರ ಸ್ವಾಮಿಗೆ ಕಲಾಹೋಮ ರುದ್ರಾಭಿಷೇಕ ಅಭಿಷೇಕ ಪೂಜೆ ನಂತರ ದೇವರಿಗೆ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥಪ್ರಸಾದ ನಂತರ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *