ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ
ಶಿವಮೊಗ್ಗ: ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಬೈಕ್ ಒಯ್ದ, ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಇದಕ್ಕೆ ರಿಪ್ಲೆ ಮಾಡಿ, ಬೈಕ್ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್ ಭಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂದಿದ್ದನು.
ಅಶೋಕ ಹೊಟೇಲ್ ಬಳಿ ಪ್ರಮೋದ್ ಭಟ್ನನ್ನು ಭೇಟಿಯಾದ ನವೀನ್ , ಬೈಕ್ ಖರೀದಿಗೆ ಆಸಕ್ತಿ ತೋರಿಸಿದ್ದ. ‘70 ಸಾವಿರ ರೂ. ಹಣ ನೀಡುತ್ತೇನೆ. ಉಳಿದ 1.20 ಲಕ್ಷ ರೂ. ಬೈಕ್ ಸಾಲವನ್ನು ತೀರಿಸುತ್ತೇನೆʼ ಎಂದು ತಿಳಿಸಿದ್ದ. ಬೈಕ್ನ ಟ್ರಯಲ್ ನೋಡುವುದಿದೆ ಎಂದು ತಿಳಿಸಿ ಕೊಂಡೊಯ್ದಿದ್ದ.
ಮಧ್ಯಾಹ್ನ 12 ಗಂಟೆಗೆ ಬೈಕ್ ಕೊಂಡೊಯ್ದವನು ಹಿಂತಿರುಗಿರಲಿಲ್ಲ. ಮಧ್ಯಾಹ್ನ 2 ಗಂಟೆವರೆಗೆ ಫೋನ್ ಸ್ವೀಕರಿಸಿದ್ದ ನವೀನ್, ಬಳಿಕ ಫೋನ್ ಸ್ವೀಕರಿಸಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೈಕ್ನ ಟ್ರಯಲ್ಗೆ ಕೊಂಡೊಯ್ದವನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪ್ರಮೋದ್ ಭಟ್ ದೂರು ನೀಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…