ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ
ಶಿವಮೊಗ್ಗ: ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಬೈಕ್ ಒಯ್ದ, ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಇದಕ್ಕೆ ರಿಪ್ಲೆ ಮಾಡಿ, ಬೈಕ್ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್ ಭಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂದಿದ್ದನು.
ಅಶೋಕ ಹೊಟೇಲ್ ಬಳಿ ಪ್ರಮೋದ್ ಭಟ್ನನ್ನು ಭೇಟಿಯಾದ ನವೀನ್ , ಬೈಕ್ ಖರೀದಿಗೆ ಆಸಕ್ತಿ ತೋರಿಸಿದ್ದ. ‘70 ಸಾವಿರ ರೂ. ಹಣ ನೀಡುತ್ತೇನೆ. ಉಳಿದ 1.20 ಲಕ್ಷ ರೂ. ಬೈಕ್ ಸಾಲವನ್ನು ತೀರಿಸುತ್ತೇನೆʼ ಎಂದು ತಿಳಿಸಿದ್ದ. ಬೈಕ್ನ ಟ್ರಯಲ್ ನೋಡುವುದಿದೆ ಎಂದು ತಿಳಿಸಿ ಕೊಂಡೊಯ್ದಿದ್ದ.
ಮಧ್ಯಾಹ್ನ 12 ಗಂಟೆಗೆ ಬೈಕ್ ಕೊಂಡೊಯ್ದವನು ಹಿಂತಿರುಗಿರಲಿಲ್ಲ. ಮಧ್ಯಾಹ್ನ 2 ಗಂಟೆವರೆಗೆ ಫೋನ್ ಸ್ವೀಕರಿಸಿದ್ದ ನವೀನ್, ಬಳಿಕ ಫೋನ್ ಸ್ವೀಕರಿಸಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೈಕ್ನ ಟ್ರಯಲ್ಗೆ ಕೊಂಡೊಯ್ದವನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪ್ರಮೋದ್ ಭಟ್ ದೂರು ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್