ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ
ಶಿವಮೊಗ್ಗ: ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಬೈಕ್ ಒಯ್ದ, ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಇದಕ್ಕೆ ರಿಪ್ಲೆ ಮಾಡಿ, ಬೈಕ್ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್ ಭಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂದಿದ್ದನು.
ಅಶೋಕ ಹೊಟೇಲ್ ಬಳಿ ಪ್ರಮೋದ್ ಭಟ್ನನ್ನು ಭೇಟಿಯಾದ ನವೀನ್ , ಬೈಕ್ ಖರೀದಿಗೆ ಆಸಕ್ತಿ ತೋರಿಸಿದ್ದ. ‘70 ಸಾವಿರ ರೂ. ಹಣ ನೀಡುತ್ತೇನೆ. ಉಳಿದ 1.20 ಲಕ್ಷ ರೂ. ಬೈಕ್ ಸಾಲವನ್ನು ತೀರಿಸುತ್ತೇನೆʼ ಎಂದು ತಿಳಿಸಿದ್ದ. ಬೈಕ್ನ ಟ್ರಯಲ್ ನೋಡುವುದಿದೆ ಎಂದು ತಿಳಿಸಿ ಕೊಂಡೊಯ್ದಿದ್ದ.
ಮಧ್ಯಾಹ್ನ 12 ಗಂಟೆಗೆ ಬೈಕ್ ಕೊಂಡೊಯ್ದವನು ಹಿಂತಿರುಗಿರಲಿಲ್ಲ. ಮಧ್ಯಾಹ್ನ 2 ಗಂಟೆವರೆಗೆ ಫೋನ್ ಸ್ವೀಕರಿಸಿದ್ದ ನವೀನ್, ಬಳಿಕ ಫೋನ್ ಸ್ವೀಕರಿಸಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೈಕ್ನ ಟ್ರಯಲ್ಗೆ ಕೊಂಡೊಯ್ದವನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪ್ರಮೋದ್ ಭಟ್ ದೂರು ನೀಡಿದ್ದಾರೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…