ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.

ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿದೆ.

ವಿವರ: ‘2021ರ ಜುಲೈನಲ್ಲಿ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು’ ಎಂದು ಮೂಲಗಳು ತಿಳಿಸಿವೆ.

ಮಹಿಳೆಯು ಏ.1ರಂದು ಕುಶಾಲನಗರದ ಹೋಟೆಲ್‌ ಒಂದರಲ್ಲಿರುವುದರ ಬಗ್ಗೆ ಸ್ನೇಹಿತರು ನೀಡಿದ ಮಾಹಿತಿಯನ್ನು ಸುರೇಶ್‌ ಪೊಲೀಸರ ಗಮನಕ್ಕೆ ತಂದಿದ್ದರು. ಪ್ರಿಯಕರ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿರುವಾಗ ಮಡಿಕೇರಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅವಸರದ ವರದಿ:

‘ಮೃತದೇಹದ ಹಾಗೂ ಮಲ್ಲಿಗೆ ಅವರ ತಾಯಿಯ ರಕ್ತದ ಡಿಎನ್‌ಎ ಪರೀಕ್ಷೆಯ ವರದಿ ಬರುವ ಮುನ್ನವೇ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ನೀಡಿದ್ದರು. ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿದಾಗ ಡಿಎನ್‌ಎ ಹೊಂದಾಣಿಕೆಯಿಲ್ಲ ಎಂಬುದು ತಿಳಿಯಿತು. ಮಡಿಕೇರಿಯಲ್ಲಿ ಮಲ್ಲಿಗೆ ಹಾಗೂ ಗಣೇಶ್‌ನನ್ನು ವಶಕ್ಕೆ ಪಡೆದ ನಂತರ ನಾವು ತೆರಳಿದಾಗ ಪೊಲೀಸರು ಆಕೆಯನ್ನು ನಮಗೆ ತೋರಿಸಲಿಲ್ಲ’ ಎಂದು ಸುರೇಶ್‌ ಪರ ವಕೀಲ ಪಾಂಡು ತಿಳಿಸಿದರು.

‘ಪ್ರಕರಣ ಮುಚ್ಚಿ ಹಾಕುತ್ತಾರೆಂಬ ಭಯದಿಂದ ನ್ಯಾಯಾಧೀಶರ ಮೂಲಕ ಆಕೆ ಯಾರು ಎಂಬ ಮಾಹಿತಿ ಪಡೆದೆ. ನ್ಯಾಯಾಲಯವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಮಹಿಳೆಯು ಮಡಿಕೇರಿಯಿಂದ ಸುಮಾರು 24 ಕಿ.ಮೀ ದೂರದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ವಾಸವಿದ್ದಾರೆ. ಆದರೂ ಆಕೆಯ ಪತ್ತೆಗೆ ಪೊಲೀಸರು ಕ್ರಮ ವಹಿಸದಿರುವುದು ವಿಷಾದನೀಯ’ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

21 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

21 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago