ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ
ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು.
ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು.
ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು ಹಿಡಿಯಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದರು. ಭಯದಿಂದಲೇ ಮುಟ್ಟುತ್ತ, ಗೂಳಿ ಜೊತೆಗೆ ಫೋಟೊ ತೆಗೆಸಿಕೊಳ್ಳುತ್ತ, ಡೊಳ್ಳು ಮತ್ತು ತಮಟೆ ವಾದ್ಯಗಳಿಗೆ ಹೆಜ್ಜೆ ಹಾಕಿದರು. ಇದೇ ವೇಳೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಡಿಜೆ ಹಾಡುಗಳಿಗೆ ರ್ಯಾಂಪ್ ವಾಕ್ ಮಾಡಿದರು.
ಬೇರೆ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಉಡುಗೆಗಳು, ಹಸಿರು ಶಾಲು ತೊಟ್ಟು ಪಂಚೆ ಉಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು. ಬಿಸಿಲ ಧಗೆಗೆ ತಂಪಾರಿಸಿಕೊಳ್ಳಲು ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಹೆಜ್ಜೆ ಹಾಕಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್, ರಾಷ್ಟ್ರೀಯ ಪ್ರೌಢಶಾಲೆಯ ಶಿಕ್ಷಕಿ ಸುಜಾತ ಜಗದೀಶ್, ಎಂಕಾಂ ವಿಭಾಗದ ಉಪನ್ಯಾಸಕಿ ಕವಿತಾ ಕ್ರಾಸ್ಟಾ, ಕಮಲಾ ನೆಹರು ಕಾಲೇಜಿನ ಉಪನ್ಯಾಸಕಿ ಅನ್ನಪೂರ್ಣ, ಎನ್.ಎಸ್.ಎಸ್ ಮುಖ್ಯಸ್ಥ ಕೆ.ಎಂ.ನಾಗರಾಜ, ಐಕ್ಯೂಎಸಿ ಸಂಯೋಜಕ ಮಂಜುನಾಥ. ಎಸ್, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಪ್ರವೀಣ್.ಬಿ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…