Categories: Blog

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ.

ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು.

1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್ ಆಪರೇಟರ್ ಆಗಿ ಕೆಲಸ ನಿರ್ವಹಿಸಿದರು. ಜೊತೆಗೆ ನಾಟಕಗಳಲ್ಲಿಯೂ ಬಣ್ಣ ಹಚ್ಚಿ ನಟಿಸುತ್ತಿದ್ದರು. ಒಮ್ಮೆ ಹೊಳಲ್ಕೆರೆಗೆ ಬಂದಿದ್ದ ಧೀರೇಂದ್ರ ಗೋಪಾಲ್ ಅವರು ಇವರ ನಾಟಕಗಳನ್ನು ನೋಡಿ ಬೆಂಗಳೂರಿಗೆ ಬರುವಂತೆ ಚಲನಚಿತ್ರಗಳಲ್ಲಿ ನಟಿಸುವಂತೆ ಪ್ರೇರೇಪಿಸಿದ್ದರು. ನಂತರ ಒಂದೂವರೆ ವರ್ಷ ಬಿಟ್ಟು ಜನಾರ್ಧನ್ ಅವರು ಬೆಂಗಳೂರಿಗೆ ಬಂದು ಧೀರೇಂದ್ರ ಗೋಪಾಲ್ ಅವರನ್ನು ಭೇಟಿ ಮಾಡಿದರು. ನಂತರದ ದಿನಗಳಲ್ಲಿ ಅವರು ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಅವರಿಗೆ ಬಾಡಿಗಾರ್ಡ್ ಪಾತ್ರ ಮಾಡಿದರು.

1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಚಿತ್ರರಂಗ ಪ್ರವೇಶಿಸಿದರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿ ಚಿತ್ರರಂಗದಲ್ಲಿ ಉತ್ತುಂಗಕ್ಕೇರಿದರು. ಸುಮಾರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.

1949ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್​ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆಯಕ್ಟೀವ್ ಆಗಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.

ಹೆಸರು ಬಂದಿದ್ದು ಹೇಗೆ?

ಜನಾರ್ಧನ್ ಅವರಿಗೆ ಬ್ಯಾಂಕ್ ಜನಾರ್ಧನ್ ಎಂದು ಹೆಸರು ಬರಲೂ ಕೂಡ ಕಾರಣವಿದೆ. ಜನಾರ್ಧನ್ ಅವರು ಚಿತ್ರದುರ್ಗದ ಸಮೀಪದ ಹೊಳಲ್​ಕೆರೆ ಬಳಿಯ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಕಲೆಯ ಬಗ್ಗೆ ಆಸಕ್ತಿ ಇತ್ತು. ಹೀಗಾಗಿ, ನಾಟಕಗಳನ್ನು ಮಾಡಿಕೊಂಡಿದ್ದರು. ಅವರ ನಾಟಕವನ್ನು ನೋಡಿ ಧೀರೇಂದ್ರ ಗೋಪಾಲ್ ಅವರು ಇಂಪ್ರೆಸ್ ಆದರು. ಬೆಂಗಳೂರಿಗೆ ಬರುವಂತೆ ಅವರು ಹೇಳಿದ್ದರು.

ನಂತರ ಒಂದೂವರೆ ವರ್ಷ ಬಿಟ್ಟು ಜನಾರ್ಧನ್ ಅವರು ಬೆಂಗಳೂರಿಗೆ ಬಂದರು. ಅವರು ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಬಾಡಿಗಾರ್ಡ್ ಪಾತ್ರ ಮಾಡಿದರು. ವಿಷ್ಣುವರ್ಧನ್ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಇದ್ದರು. ಜನಾರ್ಧನ್ ಅವರು ಸುಮಾರು 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಾಟಕಗಳಿಂದ ಆರಂಭ ಆದ ಅವರ ಬದುಕು ನಂತರ ಸಿನಿಮಾಗಳತ್ತ ಹೊರಳಿತು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡೇ ಅವರು ಆರಂಭದಲ್ಲಿ ಚಿತ್ರರಂಗದಲ್ಲಿ ಸಮಯ ಕಳೆದರು. ನಂತರದ ದಿನಗಳಲ್ಲಿ ಅವರಿಗೆ ದೊಡ್ಡ ದೊಡ್ಡ ಆಫರ್​ಗಳು ಬರೋಕೆ ಆರಂಭ ಆದವು. ಅವರು ಚಿತ್ರರಂಗದಲ್ಲಿ ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

24 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago