ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –
ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ.
ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು ಊಟ ಮುಗಿಸಿ ಪುತ್ರ ಜಾವೇದ್ ಹಿನ್ನೀರಿನಲ್ಲಿ ಇಳಿದಾಗ ಆಳದ ಅಂದಾಜಿಲ್ಲದ ಕಾರಣ ನೀರು ಪಾಲಾಗಿದ್ದನು.ಇದನ್ನು ನೋಡಿದ ತಂದೆ ಮಗನನ್ನು ರಕ್ಷಿಸಲು ನೀರಿಗೆ ಇಳಿದು ಅವರೂ ನೀರುಪಾಲಾಗಿದ್ದರು ,ಸಂಜೆಯ ವೇಳೆ ಮಗ ಶವವಾಗಿ ಪತ್ತೆಯಾದರೆ ತಂದೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ.
ನೀರಿಗಿಳಿದು ಮುಳುಗಿದ ಮಗನನ್ನು ರಕ್ಷಿಸಲು ಹೋದ ತಂದೆಯೂ ನೀರುಪಾಲಾದ ಘಟನೆಯ ಹಿನ್ನೆಲೆಯಲ್ಲಿ ಮಲ್ಪೆಯ ಈಜು ತಜ್ಞ ಮಲ್ಪೆ ಈಶ್ವರ್ ಅವರನ್ನು ಕರೆಸಿ ಇಬ್ಬರ ಶವವನ್ನು ಹೊರ ತೆಗೆಯಲಾಗಿದೆ.
ವಿಧಿಯಾಟ ಎಂಬಂತೆ ತಂದೆ ಮಗ ಇಬ್ಬರೂ ನೀರು ಪಾಲಾಗಿದ್ದಾರೆ. ಇಬ್ಬರ ಶವಕ್ಕೆ ಹುಡುಕಾಟ ನಡೆಸಲಾಗಿ ಮಗನ ಶವ ಭಾನುವಾರ ರಾತ್ರಿ ೮ ಗಂಟೆಗೆ ಪತ್ತೆಯಾಗಿದೆ. ಅನುಭವಿ ಈಜುಗಾರರು ಎಷ್ಟು ಹುಡುಕಾಡಿದರೂ ಮತ್ತೊಂದು ಶವ ಸಿಗಲಿಲ್ಲ.
ಈಜು ತಜ್ಞ ಮಲ್ಪೆ ಈಶ್ವರ್ ಅವರನ್ನು ಕರೆಸಿ ರಾತ್ರಿ ೩ ಗಂಟೆಗೆ ನೀರಿನ ನೂರಾರು ಅಡಿ ಆಳದ ಬಂಡೆಯಡಿ ಸಿಲುಕಿಕೊಂಡಿದ್ದ ಶವವನ್ನು ಪತ್ತೆ ಹಚ್ಚಿ ಮೇಲಕ್ಕೆತ್ತಿ ಎಳೆತಂದಿದ್ದಾರೆ.
ಸೋಮವಾರ ಮಧ್ಯಾಹ್ನ ತಂದೆ ಮಗ ಇಬ್ಬರ ಅಂತ್ಯ ಸಂಸ್ಕಾರ ನಡೆದಿದ್ದು ನೂರಾರು ಮಂದಿ ಕಂಬನಿ ಮಿಡಿದಿದ್ದಾರೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…