ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –
ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ.
ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು ಊಟ ಮುಗಿಸಿ ಪುತ್ರ ಜಾವೇದ್ ಹಿನ್ನೀರಿನಲ್ಲಿ ಇಳಿದಾಗ ಆಳದ ಅಂದಾಜಿಲ್ಲದ ಕಾರಣ ನೀರು ಪಾಲಾಗಿದ್ದನು.ಇದನ್ನು ನೋಡಿದ ತಂದೆ ಮಗನನ್ನು ರಕ್ಷಿಸಲು ನೀರಿಗೆ ಇಳಿದು ಅವರೂ ನೀರುಪಾಲಾಗಿದ್ದರು ,ಸಂಜೆಯ ವೇಳೆ ಮಗ ಶವವಾಗಿ ಪತ್ತೆಯಾದರೆ ತಂದೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ.
ನೀರಿಗಿಳಿದು ಮುಳುಗಿದ ಮಗನನ್ನು ರಕ್ಷಿಸಲು ಹೋದ ತಂದೆಯೂ ನೀರುಪಾಲಾದ ಘಟನೆಯ ಹಿನ್ನೆಲೆಯಲ್ಲಿ ಮಲ್ಪೆಯ ಈಜು ತಜ್ಞ ಮಲ್ಪೆ ಈಶ್ವರ್ ಅವರನ್ನು ಕರೆಸಿ ಇಬ್ಬರ ಶವವನ್ನು ಹೊರ ತೆಗೆಯಲಾಗಿದೆ.
ವಿಧಿಯಾಟ ಎಂಬಂತೆ ತಂದೆ ಮಗ ಇಬ್ಬರೂ ನೀರು ಪಾಲಾಗಿದ್ದಾರೆ. ಇಬ್ಬರ ಶವಕ್ಕೆ ಹುಡುಕಾಟ ನಡೆಸಲಾಗಿ ಮಗನ ಶವ ಭಾನುವಾರ ರಾತ್ರಿ ೮ ಗಂಟೆಗೆ ಪತ್ತೆಯಾಗಿದೆ. ಅನುಭವಿ ಈಜುಗಾರರು ಎಷ್ಟು ಹುಡುಕಾಡಿದರೂ ಮತ್ತೊಂದು ಶವ ಸಿಗಲಿಲ್ಲ.
ಈಜು ತಜ್ಞ ಮಲ್ಪೆ ಈಶ್ವರ್ ಅವರನ್ನು ಕರೆಸಿ ರಾತ್ರಿ ೩ ಗಂಟೆಗೆ ನೀರಿನ ನೂರಾರು ಅಡಿ ಆಳದ ಬಂಡೆಯಡಿ ಸಿಲುಕಿಕೊಂಡಿದ್ದ ಶವವನ್ನು ಪತ್ತೆ ಹಚ್ಚಿ ಮೇಲಕ್ಕೆತ್ತಿ ಎಳೆತಂದಿದ್ದಾರೆ.
ಸೋಮವಾರ ಮಧ್ಯಾಹ್ನ ತಂದೆ ಮಗ ಇಬ್ಬರ ಅಂತ್ಯ ಸಂಸ್ಕಾರ ನಡೆದಿದ್ದು ನೂರಾರು ಮಂದಿ ಕಂಬನಿ ಮಿಡಿದಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್