RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ
ರಿಪ್ಪನ್ ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ.
ಶಿಕಾರಿಪುರದ ಶ್ರುತಿ (34) ಹಾಗೂ ರಿಪ್ಪನ್ ಪೇಟೆಯ ನಿವಾಸಿ ಸತೀಶ್ ಬಿನ್ ಶಿವಾಜಿರಾವ್ (49) ರವರಿಗೆ ಗಾಯಗಳಾಗಿವೆ.
ಸಾಗರದಿಂದ ತೀರ್ಥಹಳ್ಳಿಗೆ ಪ್ರಯಾಣಿಸುತಿದ್ದ ಭಾಗ್ಯಲಕ್ಷ್ಮಿ ಬಸ್ ನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ಶಿಕಾರಿಪುರದಿಂದ ರಿಪ್ಪನ್ ಪೇಟೆಗೆ ಬಂದಿದ್ದ ಶ್ರುತಿ ಹಾಗೂ ಇಬ್ಬರು ಮಕ್ಕಳನ್ನು ಇಳಿಸಲು ಡ್ರೈವರ್ ಬಸ್ ನಿಲ್ಲಿಸಿದ್ದಾನೆ ಈ ಸಂಧರ್ಭದಲ್ಲಿ ಅವರನ್ನು ಕರೆದುಕೊಂಡು ಹೋಗಲು ಸ್ಕೂಟಿಯಲ್ಲಿ ಬಂದಿದ್ದ ಸತೀಶ್ ಅಲ್ಲಿಯೇ ನಿಂತಿದ್ದಾರೆ ಈ ಸಂಧರ್ಭದಲ್ಲಿ ಏಕಾಏಕಿ ಬೃಹತ್ ಮಾವಿನ ಮರ ಕೆಳಗೆ ಉರುಳಿದೆ.
ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಆದರೆ ನಿಲ್ದಾಣದಲ್ಲಿ ಬಸ್ ನಿಂದ ಕೆಳಗಿ ಇಳಿದಿದ್ದ ಶ್ರುತಿ ಹಾಗೂ ಸ್ಕೂಟಿ ನಿಲ್ಲಿಸಿಕೊಂಡು ಅವರಿಗಾಗಿ ಕಾಯುತಿದ್ದ ಸತೀಶ್ ರವರ ಮೇಲೆ ಮರ ಬಿದ್ದ ಕಾರಣ ಗಾಯಾಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…