ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಬಿ ಆರ್ ಜಯಂತ್ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಚಂದ್ರಪ್ಪ ಕಲಸೆ, ಹೊಸನಗರ ಬ್ಲಾಕ್ ಅಧ್ಯಕ್ಷರು ಚಂದ್ರಮೌಳಿ , ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷರು ಮಹೇಂದ್ರ ಬುಕ್ಕಿವರೆ, ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಸದ್ದಾಂ ದೊಡ್ಮನೆ , ಹೊಸನಗರ ಗ್ಯಾರಂಟಿ ಸಮಿತಿ ಅಧ್ಯಕ್ಷರು ಚಿದಂಬರ್ , ಸಾಗರ ನಗರ ಅಧ್ಯಕ್ಷರು ಸುರೇಶ್ ಬಾಬಣ್ಣ ,ಸಾಗರ ಎನ್ ಎಸ್ ಯು ಐ ಅಧ್ಯಕ್ಷ ಚಿನ್ಮಯ್ , ಯುವ ಮುಖಂಡರಾದ ಮನೋಜ್ , ಸಾಗರ ನಗರ ಮಹಿಳಾ ಅಧ್ಯಕ್ಷರು ಕು.ಉಷಾ ಸಾಗರ ತಾಲೂಕು ಪರಿಶಿಷ್ಟ ಜಾತಿ ತಾಲೂಕ ಅಧ್ಯಕ್ಷರು ಸೋಮಶೇಖರ್. ನಗರ ಪರಿಶಿಷ್ಟ ಜಾತಿ ಅಧ್ಯಕ್ಷರು ಎಲ್ ಚಂದ್ರಪ್ಪ. ತಾಲ್ಲೂಕು ಅಲ್ಪ ಸಂಖ್ಯಾತರ ಘಟಕ ಕಬೀರ್ ಚಿಪ್ಲಿ. ನಗರ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷರು ಅಜಿಮ್ ಕೆ. ನಗರ ಸಭಾ ಸದಸ್ಯರು. ಸಮಿತಿ ಯ ಸದಸ್ಯರು ಮುಖಂಡರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್