Headlines

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ.

21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಸುಮಾರು 1.4 ಕೆಜಿ ಗಾಂಜಾ ಇಟ್ಟುಕೊಂಡಿದ್ದ ಖಚಿತ ಮಾಹಿತಿ ಮೇರೆಗೆ ನಾಲ್ಕು ಆರೋಪಿಗಳನ್ನು ಬಂಧಿಸಿದ್ದರು.

ಇದರಲ್ಲಿ ನಸ್ರು ಎನ್ನುವ ಆರೋಪಿ ತಪ್ಪಿಸಿಕೊಂಡಿದ್ದ. ಇಂದು ಬೆಳಿಗ್ಗೆ ಪಿಎಸ್ಐ ಚಂದ್ರಶೇಖರ್ ಮತ್ತು ತಂಡ ಅವನನ್ನು ಹಿಡಿಯಲು ಹೋದಾಗ, ಅವನು ಪಿಎಸ್ಐ ಮತ್ತು ಸಿಬ್ಬಂದಿಯ ಮೇಲೆ ಕಂಟ್ರಿ ಪಿಸ್ತೂಲ್ ಮತ್ತು ಚಾಕುಗಳಿಂದ ದಾಳಿ ಮಾಡಲು ಪ್ರಯತ್ನಿಸಿದ್ದು. ಆಗ ಅನಿವಾರ್ಯವಾಗಿ ಆತನ ಕಾಲಿಗೆ ಪಿಎಸ್ಐ ಚಂದ್ರಶೇಖರ್ ಗುಂಡು ಹಾರಿಸಿದ್ದಾರೆ.ಬಂಧಿತ ಆರೋಪಿ ನಸ್ರುನಿಂದ ಒಂದು ಕಂಟ್ರಿ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *