ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್
ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.
ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್ (24), ಭದ್ರಾವತಿ ಬಾರಂದೂರಿನ ಅಜಿತ್ ಅಲಿಯಾಸ್ ಘಟ್ಟ (19), ಕಬಳಿಕಟ್ಟೆಯ ಮಂಜುನಾಥ್ ಅಲಿಯಾಸ್ ಮಂಜು (21) ಬಂಧಿತರು.
ಶಿವಮೊಗ್ಗದ ಆರ್.ಎಂ.ಎಲ್ ನಗರದ ಕಾರ್ತಿಕ್ ಓಮ್ನಿ ಕಾರಿನಲ್ಲಿ 3.50 ಲಕ್ಷ ರೂ. ಮೌಲ್ಯದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳನ್ನು ಕೊಂಡೊಯ್ಯುತ್ತಿದ್ದರು. ಮಾರ್ಚ್ 25ರಂದು ಬೆಳಗ್ಗೆ 6.30ರ ಹೊತ್ತಿಗೆ ಭದ್ರಾವತಿಯ ರಾಮಿನಕೊಪ್ಪದಲ್ಲಿ ಓಮ್ನಿ ಕಾರನ್ನು ಅಡ್ಡಗಟ್ಟಿದ ನಾಲ್ವರು, ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 700 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳು, ಕೃತ್ಯಕ್ಕೆ ಬಳಸಿದ ಟಾಟಾ ಏಸ್ ವಾಹನ, ಒಂದು ಪಲ್ಸರ್ ಬೈಕ್ ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ್ ನೇತೃತ್ವದ ತಂಡ ಆರೋಪಿಗಳನ್ನ ಬಂಧಿಸಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…