ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !
ಶಿವಮೊಗ್ಗ, ಏಪ್ರಿಲ್ 24, : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.
ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡಕೈ ಮುಂಗೈ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ MOM DAD ಮತ್ತು Priya ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾಳೆ. ಕನ್ನಡ ಮಾತನಾಡಲು, ಓದಲು ಬರೆಯಲು ಬಲ್ಲವಳಾಗಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.
ಈ ಯುವತಿ ಪತ್ತೆಯಾದಲ್ಲಿ ಶಿವಮೊಗ್ಗಜಿಲ್ಲೆ :- 08182-261400, ತೀರ್ಥಹಳ್ಳಿ :- 08181 – 220388, ಮಾಳೂರು :- 9480803333, ಆಗುಂಬೆ :- 9480803314 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…