ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ
ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ.
ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45 ರವರೆಗೆ ಮಳೆ ಗುಡುಗು-ಸಿಡಿಲು, ಗಾಳಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿಯತೊಡಗಿತ್ತು.
ಪಟ್ಟಣದ ವ್ಯಾಪ್ತಿಯ ಗವಟೂರು , ಕೆದಲಗುಡ್ಡೆ ಗ್ರಾಮಗಳಲ್ಲಿ ಮನೆ ಮೇಲೆ ಮರ ಬಿದ್ದು ಭಾರಿ ಅನಾಹುತವಾಗಿರುವ ಬಗ್ಗೆ ವರದಿಯಾಗಿದೆ. ಇನ್ನೂ ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ.
ಕಳೆದ ಹದಿನೈದು ದಿನಗಳಿಂದೀಚೆಗೆ ವಿಪರೀತ ಸೆಖೆಯ ವಾತಾವರಣ ಇತ್ತು.34 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನವಿತ್ತು. ಜನರು ಮಳೆಗೆ ಕಾತರಿಸುತ್ತಿದ್ದರು. ಇಂದು ಸುರಿದ ಮಳೆಯಿಂದಾಗಿ ತಂಪಾಗಿದೆ.
ಇನ್ನೂ ಭಾರಿ ಮಳೆಯಿಂದ ಹಲವಾರು ಕಡೆ ಅನಾಹುತಗಳು ನಡೆದಿರುವ ಬಗ್ಗೆ ವರದಿಯಾಗಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…