ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ
ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು
ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್, ಷಣ್ಮುಖ, ಪ್ರವೀಣ್, ನಾಗರತ್ನ, ಸುಮಿತ್ರಮ್ಮ, ಚಂದ್ರಶೇಖರ ಮಳವಳ್ಳಿ, ಶೇಖರಪ್ಪ ಕಣಬಂದೂರು, ವಿನಮತಿ ರಾಘವೇಂದ್ರ, ನಾಸಿಮಾ ರಫೀಕ್, ಇನ್ನಿತರರು, ಪಕ್ಷದ ಮುಖಂಡರು ಪಾಲ್ಗೊಂಡು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭಕೋರಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್