RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ
ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು.
ರಿಪ್ಪನ್ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ ಕುಗ್ಗುವುದಿಲ್ಲ ಈಗಾಗಲೇ ದೇಶದ ಪ್ರಧಾನಿ ಮೋದಿಯವರು ಹಾಗೂ ಗೃಹ ಸಚಿವರು ಸಭೆಗಳನ್ನು ನಡೆಸುವುದರೊಂದಿಗೆ ಉಗ್ರರಿಗೆ ತಕ್ಕ ಪ್ರತಿ ಉತ್ತರ ನೀಡುವುದರ ಬಗ್ಗೆ ಚರ್ಚಿಸಿದ್ದು ದೇಶದ ಹಿಂದೂಗಳೆಲ್ಲ ಸಂಘಟಿತರಾಗಿ ಭಯೋತ್ಪಾದನೆಯನ್ನು ಮಟ್ಟಹಾಕಬೇಕು ಎಂದರು.
ಪ್ರತಿಭಟನೆಯಲ್ಲಿ ಹಿಂದೂ ಪರ ಸಂಘಟನೆಗಳ ಮತ್ತು ಸಿದ್ದಿವಿನಾಯಕ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ, ಎನ್.ಸತೀಶ್, ಎಂ.ಸುರೇಶಸಿಂಗ್, ಎಂ.ಬಿ.ಮಂಜುನಾಥ, ಎಂ.ಡಿ.ಇಂದ್ರಮ್ಮ, ಪದ್ಮಾ ಸುರೇಶ್, ರೇಖಾರವಿಕುಮಾರ್, ನಾಗರತ್ನ ದೇವರಾಜ್, ಕೆರೆಹಳ್ಳಿ ರವೀಂದ್ರ, ಹಾರೋಹಿತ್ತಲು ಈಶ್ವರಪ್ಪಗೌಡ, ಫ್ಯಾನ್ಸಿ ರಮೇಶ್, ಆಶಾ, ಸರಸ್ವತಿ ರಾಘವೇಂದ್ರ, ಕೋಮಲ ಕೇಶವ, ಲೀಲಾ ಉಮಾಶಂಕರ್, ಕೆ.ವಿ.ಲಿಂಗಪ್ಪ ಕಗ್ಗಲಿ, ನಾಗರಾಜ, ಮುರುಳಿ ಕೆರೆಹಳ್ಳಿ, ಆದರ್ಶ ಕಲ್ಲೂರು, ಜಿ.ಡಿ. ಮಲ್ಲಿಕಾರ್ಜುನ, ಪ್ರಕಾಶಶೆಟ್ಟಿ, ಇನ್ನಿತರ ಹಲವರು ಪಾಲ್ಗೊಂಡು ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಉಗ್ರರಿಗೆ ತಕ್ಕೆ ಶಾಸ್ತಿ ಮಾಡುವವರೆಗೂ ನಮ್ಮ ಸೈನಿಕರು ಹಿಂಜರಿಯದಂತೆ ಭಗವಂತ ಹೆಚ್ಚಿನ ಶಕ್ತಿ ಶೌರ್ಯ ಕಲ್ಪಿಸಲೆಂದು ಪ್ರಾರ್ಥಿಸಿದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…