ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ

ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು.

ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನೆಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತ್ತು ಅಂಗನವಾಡಿಯ ಚಿಣ್ಣರ ಸಾಂಸ್ಕೃತಿಕ ಸಹಿ ಸಿಂಚನ ಶಾಲಾ ವಾರ್ಷೀಕೋತ್ಸವ ಕಾರ್ಯಕ್ರಮದಲ್ಲಿ “ನಲಿಕಲಿ ಕೊಠಡಿ ಉದ್ಘಾಟಿಸಿ ಮಾತನಾಡಿ ಭೌತಿಕ ಹಾಗೂ ಬೌದ್ದಿಕ ವಾತಾವರಣಕ್ಕೆ ಶಿಕ್ಷಕರು ಕ್ರಿಯಾಶೀಲತೆ ಕಾರಣ.ಮಕ್ಕಳ ಕಲಿಕೆಯು ಉತ್ತಮವಾಗಿಸಲು ಶಿಕ್ಷಕರ ಪರಿಶ್ರಮವೇ ಸಾಕ್ಷಿಯಾಗಿದೆ ಎಂದು ಹೇಳಿ  ಅಕ್ಷರ ಅಲಂಕಾರಗಳಿAದ ಬಣ್ಣ ಬಣ್ಣದ ವರ್ಣರಂಜಿತ ಗೋಡೆ ಬರಹದಿಂದ ಕೂಡಿದ ಕೊಠಡಿಯಲ್ಲಿನ ಚಿತ್ರಪಟಗಳು ಮಕ್ಕಳಿಗೆ ಕುಳಿತು ಕೊಳ್ಳಲು ಅಸನದ ವ್ಯವಸ್ಥೆಗಳ ನಲಿಕಲಿ ಕೊಠಡಿಯನ್ನು ಕುರಿತು ಶಿಕ್ಷಕರ ಕ್ರಿಯಾಶೀಲತೆ ಕಾರ್ಯದಕ್ಷತೆಯನ್ನು ಪ್ರಶಂಸಿ ಈ ಎಲ್ಲ ಶಾಲಾ ಚಟುವಟಿಕೆಗೆ ನವೋತ್ಸಾಹಿ ಹಳೆ ವಿದ್ಯಾರ್ಥಿಗಳ ಮತ್ತು ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರ ಸಹಕಾರದಿಂದ ಶಿಕ್ಷಕವರ್ಗ ಪೋಷಕರೊಂದಿಗಿನ ಒಡನಾಟವೇ  ಈ ಶಾಲೆ ಆಭಿವೃದ್ದಿ ಹೊಂದಲು ಕಾರಣವಾಗಿದೆ ಎಂದರು.

ಶಾಲಾ ವಾರ್ಷೀಕೋತ್ಸವ ಮತ್ತು ಚಿಣ್ಣರ ಸಾಂಸ್ಕೃತಿಕ ಸಹಿ ಸಿಂಚನ ಕಾರ್ಯಕ್ರಮವನ್ನು ಹುಂಚ ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಸುಮಂಗಳ ದೇವರಾಜ್ ಉದ್ಘಾಟಿಸಿದರು.

ಎಸ್.ಡಿ.ಎಂ.ಸಿ.ಆದ್ಯಕ್ಷ ಸುಧಾಕರ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಪ್ರಾಚಾರ್ಯ ಶಾಂತಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಇಸಿಓ ಕರಿಬಸಪ್ಪ, ಶಿವಪ್ಪ, ಎಸ್.ಡಿ.ಎಂ.ಸಿ.ಸಮಿತಿ ಪದಾಧಿಕಾರಿಗಳು  ಮಾಜಿ ಸೈನಿಕರು ಮತ್ತು ರೈತರು ಶಾಲಾ ಮಕ್ಕಳ ಪೋಷಕವರ್ಗ ಹಳೆ ವಿದ್ಯಾರ್ಥಿ ಸಮೂಹ ಹಾಜರಿದ್ದರು.

ಶಾಲೆಯ ವಾರ್ಷೀಕೋತ್ಸªದ ಯಶಸ್ವಿಗೆ ತನು ಮನ ಧನವನ್ನು ನೀಡುವ ಮೂಲಕ  ಸಹಕರಿಸಿದ ಅಕ್ಕಪಕ್ಕದ ಮತ್ತು ಹೊನ್ನೆಬೈಲು ಗ್ರಾಮಗಳ ಗ್ರಾಮಸ್ಥರು ಪೋಷಕವರ್ಗ  ಶಾಲಾ ಶಿಕ್ಷಕ ವೃಂದ  ಆಭಿನಂದಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು,ಸಿ.ಆರ್.ಪಿ. ದೀಪ ಪ್ರಾಸ್ತಾವಿಕವಾಗಿ ಮಾತನಾಡಿದರು,ಸಹ ಶಿಕ್ಷಕ ಕುಮಾರಸ್ವಾಮಿ ನಿರೂಪಿಸಿದರು.ಅಂಗನವಾಡಿ ಶಿಕ್ಷಕಿ ಮಾನಸ ವಂದಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಮತ್ತು ಅಂಗನವಾಡಿ ಮಕ್ಕಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 hour ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

19 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago