ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ.

ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ದಿನಾಂಕ 22/12/2021 ರಂದು ರಾತ್ರಿ 11.30 ಗಂಟೆ ಸಮಯದಲ್ಲಿ ಗರ್ತಿಕೆರೆ ವಾಸಿ ಸತೀಶ ಶೆಟ್ಟಿ, ಎಂಬುವವನು ತನ್ನ ಸ್ನೇಹಿತರಾದ ಫಯಾಜ್ @ ಕೋಳಿ ಫಯಾಜ್ ಮತ್ತು ಕೃಷ್ಣ ರವರೊಂದಿಗೆ ಇದ್ದಾಗ ಸತೀಶ ಶೆಟ್ಟಿಯು ಕೂಲಿ ಕೆಲಸದ ಹಣ ಕೇಳಿದನೆಂಬ ವಿಚಾರದಲ್ಲಿ ಫಯಾಜ್ @ ಕೋಳಿ ಫಯಾಜ್ ಮತ್ತು ಕೃಷ್ಣ ಸೇರಿಕೊಂಡು ಅಮೃತ ಗ್ರಾಮದ ಕೆಳಗಿನ ಕೆರೆ ದಂಡೆಯ ಮೇಲೆ ಕರೆದುಕೊಂಡು ಹೋಗಿ ಕಟ್ಟಿ ಮತ್ತು ಚಾಕುವಿನಿಂದ ಮೃತನ ಕುತ್ತಿಗೆ, ಎಡಕೆನ್ನೆ, ಎಡಕಿವಿಯ ಕೆಳಭಾಗಕ್ಕೆ ಕೊಯ್ದು ಕೊಲೆ ಮಾಡಿ, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಶವವನ್ನು ಕೆರೆಯ ನೀರಿನಲ್ಲಿ ಹಾಕಿದ್ದು ಈ ಬಗ್ಗೆ ದಿನಾಂಕ;23/12/2021 ರಂದು ಸತೀಶಶೆಟ್ಟಿರವರ ಭಾವ ರಾಜುಶೆಟ್ಟಿ ರವರು ನೀಡಿದ ದೂರಿನ ಮೇರೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 143/2021 ಕಲಂ302 , 34 IPC ಐಪಿಸಿ ಪ್ರಕರಣದಾಖಲಾಗಿರುತ್ತದೆ.

ಸದರಿ ಪ್ರಕರಣದ ತನಿಖೆಯನ್ನು ಶ್ರೀ ಮಧುಸೂಧನ ಸಿಪಿಐ ರವರು ನಡೆಸಿ ಆರೋಪಿತರ ವಿರುದ್ಧ ಕಲಂ 302, 201 ಸಹಿತ 34 ಐಪಿಸಿ ರೀತ್ಯಾ ದೋಷಾರೋಪಣಾ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಮಾನ್ಯ 05 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಸಾಗರ ಪೀಠ ರವರ ಮುಂದೆ ಪ್ರಕಣದ ವಿಚಾರಣೆ ನಡೆದು ಆರೋಪಿತರುಗಳು ಕೃತ್ಯವೆಸಗಿರುವುದು ಸಾಭೀತಾಗಿರುವುದರಿಂದ ಆರೋಪಿತರುಗಳಿಗೆ ಕಲಂ 302, ಕೊಲೆ ಮಾಡಿದ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ ದಂಡ ಮತ್ತು ಕಲಂ 201 ಸಾಕ್ಷಿ ನಾಶಕ್ಕೆ 3 ವರ್ಷ ಶಿಕ ಮತ್ತು 3 ಸಾವಿರ ರೂ ದಂಡ ವಿಧಿಸಿರುತ್ತದೆ.

ಪ್ರಸ್ತುತ ಹೊಸನಗರ ಪೊಲೀಸ್‌ ವೃತ್ತ ನಿರೀಕ್ಷಕರಾದ ಗುರಣ್ಣ ಹೆಬ್ಬಾಳ್ ಮತ್ತು ರಿಪ್ಪನ್ ಪೇಟೆ ಪಿಎಸ್‌ಐ ರವರಾದ  ಪ್ರವೀಣ್ ಎಸ್ ಪಿ ರವರು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಸಾಕ್ಷಿದಾರರನ್ನು ಹಾಜರುಪಡಿಸುವ ಬಗ್ಗೆ ಮಾನಿಟರಿಂಗ್ ಮಾಡಿರುತ್ತಾರೆ.

ಪ್ರಕರಣದಲ್ಲಿ ನಗರ ಪೊಲೀಸ್ ಠಾಣೆಯ ಹೆಚ್.ಸಿ ಗಿರಿಪ್ರಸಾದ್ ರವರು ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago