RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ
ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದವರು ಮಂಗನನ್ನು ಆರೈಕೆ ಮಾಡಿ ಕೂಡಲೇ ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕಾಗಮಿಸಿದ ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರು ಮಂಗನ ಸೂಕ್ತ ಆರೈಕೆಗಾಗಿ ಇಲಾಖೆಯ ವಾಹನದಲ್ಲಿ ಸಿಂಹಧಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಅನಿಲ್ , ಆಕಾಶ್ ಸ್ಥಳೀಯರಾದ ರವೀಂದ್ರ ಕೆರೆಹಳ್ಳಿ , ಶ್ರೀನಿವಾಸ್ ಆಚಾರ್ , ಶಿವಾಜಿ ರಾವ್ , ದೇವರಾಜ್ ಹಾಗೂ ಇನ್ನಿತರರಿದ್ದರು.