
ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು
ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಮಂಗಳವಾರ ಪಹಲ್ಗಾಮ್ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…