ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ
ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ ಗ್ರಾಮಾಂತರ ಪೊಲೀಸರು ರಕ್ಷಿಸಿದ್ದಾರೆ.
ನಿನ್ನೆ ರಾತ್ರಿ ವೀರಾಪುರ ಗ್ರಾಮದಲ್ಲಿ 12 ಕರುಗಳು ಮತ್ತು 6 ಹೋರಿಗಳನ್ನ ತಂದಿರಿಸಲಾಗಿದೆ. ಮಾಂಸ ಮಾರಾಟ ಮಾಡುವ ಅಕ್ರಮ ಗೋಕಸಾಯಿಖಾನೆಯಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ದಾಳಿ ನಡೆಸಿ 17 ಹಸುಗಳನ್ನ ರಕ್ಷಿಸಲಾಗಿದೆ.
ಈಗ ನಡೆದ ಕಸಾಯಿ ಖಾನೆಯ ಮೇಲೆ ಈ ಹಿಂದೆಯೂ ದಾಳಿ ನಡೆದಿತ್ತು. ಗೋಮಾಂಸಗಳು ಪತ್ತೆಯಾಗಿತ್ತು. ಈಗ ಇದು ಎರಡನೇ ಬಾರಿ ದಾಳಿ ನಡೆಸಲಾಗುತ್ತಿದೆ. ಒಮ್ಮೆ ಕಸಾಯಿ ಖಾನೆ ಮೇಲೆ ದಾಳಿ ನಡೆದರೆ ಅದನ್ನ ಸಂಪೂರ್ಣ ಸೀಜ್ ಮಾಡಬೇಕು. ತಹಶೀಲ್ದಾರ್ ಮೂಲಕ ಕ್ರಮ ಜರುಗಿಸಬೇಕು. ಆದರೆ ಎರಡೆರಡು ಬಾರಿ ಗೋವಿನ ವಧೆಯಾಗುತ್ತಿದ್ದರೂ ಕ್ರಮ ಕೈಗೊಳ್ಳದಿರುವ ಬಗ್ಗೆ ಹಿಂದೂ ಸಂಘಟನೆ ಪೊಲೀಸರ ದಾಳಿಯ ಮೇಲೆ ಸಂಶಯ ವ್ಯಕ್ತಪಡಿಸಿವೆ.
ರಕ್ಷಿಸಿದ ಗೋವುಗಳನ್ನು ಕೂಡ್ಲಿ ಶೃಂಗೇರಿ ಮಠಕ್ಕೆ ಬಿಡಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…