ಚಾಕೊಲೇಟ್ ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ – ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!
ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು.
ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.
ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…