RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು
ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ.
ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಕರುವು ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ಮೂಗೂಡ್ತಿ ಗ್ರಾಮದ ರುದ್ರಪ್ಪಗೌಡ ರವರ ಪುತ್ರನಾದ ಅರುಣ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…