ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ
ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಶಿರಸಿಯಿಂದ ಬಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು.
ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದ್ದಾರೆ.