ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್
ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿ ಬಂಧಿಸಿದ್ದಾರೆ.
ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು.
ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ, ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಂದು ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೂ ಕೂಡ ಇಡಿ. ಅಧಿಕಾರಿಗಳು ನಡೆಸಿದ್ದರು. ಅಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ಮಂಜುನಾಥ್ ಗೌಡ ಅವರ ವಿಚಾರಣೆ ನಡೆಸಿದ್ದರು. 2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣ ಭಾರಿ ಸುದ್ದಿಯಾಗಿತ್ತು. ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಲಾಗಿತ್ತು. ಇಡಿ ಅಧಿಕಾರಿಗಳು ಅವರನ್ನು 14 ದಿನ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್