HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು.
ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ ಭಯೋತ್ಪಾದಕರು ಆಘಾತವನ್ನು ನೀಡಿದ್ದಾರೆ ಈ ಕೃತ್ಯವನ್ನ ನಮ್ಮ ಸೈನಿಕರು ಸವಾಲಾಗಿ ಸ್ವೀಕರಿಸಿ ಈ ಕೃತ್ಯಕ್ಕೆ ದಿಟ್ಟ ಉತ್ತರವನ್ನು ನೀಡಬೇಕು ಈ ಭಯೋತ್ಪಾದಕರ ನಿರ್ಣಾಮಕ್ಕೆ ಸೈನಿಕರಿಗೆ ಸರ್ಕಾರ ಸಂಪೂರ್ಣವಾದ ಅಧಿಕಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಈ ಒಂದು ಕೃತ್ಯವನ್ನು ದೇಶದ ಮುಸ್ಲಿಂ ಸಂಘಟನೆಗಳಾಗಲಿ ಮುಖಂಡರಾಗಲಿ ವಿರೋಧಿಸದೇ ಇರುವುದು ಖಂಡನಿಯ ಈ ದೇಶದ ಪರವಾಗಿ ಮುಸಲ್ಮಾನರು ಇರುವುದು ನಿಜವಾಗಿದ್ದರೆ ಮೊದಲು ಅವರು ಈ ಕೃತಿಯನ್ನು ವಿರೋಧಿಸಬೇಕಿತ್ತು ಎಂದರು.ಬಳಿಕ ಉಪ ತಹಸಿಲ್ದಾರ್ ರಾಕೇಶ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ಸುಬ್ರಹ್ಮಣ್ಯ ಮತ್ತಿ ಮನೆ, ಬಿಜೆಪಿ ಜಿಲ್ಲಾ
ಒಬಿಸಿ ಮೋರ್ಚ ಅಧ್ಯಕ್ಷರಾದ ಎಂ ಎನ್ ಸುಧಾಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಮುಖಂಡರಾದ ಗಣಪತಿ ಬೆಳಗೋಡು, ಸುಧೀಂದ್ರ ಪಂಡಿತ್, ರಮೇಶ್, ಮೋಹನ್ ಮಂಡನಿ, ಅಭಿಲಾಶ್ ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…