ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ ಸಂಭವಿಸಿದೆ. ಆರೋಪಿ ಶ್ರೀನಿವಾಸ ಅಲಿಯಸ್ ಸೀನಾ (೨೫) ಶಿಕಾರಿಪುರದ ಪ್ರಗತಿನಗರದ ವಾಸಿಯಾಗಿದ್ದಾನೆ. ಆತ ಮನೆಯಲ್ಲಿರುವುದನ್ನು ಅರಿತ ಮಾಳೂರು ಪಿಎಸ್ಐ ಕುಮಾರ್ ಮತ್ತು ಅವರ ತಂಡ ಗುರುವಾರ ಮಧ್ಯಾಹ್ನ ಸೆರೆಹಿಡಿಯಲು ಧಾವಿಸಿದಾಗ ಆರೋಪಿ ಪ್ರತಿ ದಾಳಿ ನಡೆಸಿದನು. ಇದರಿಂದ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಲಾಯಿತಾದರೂ ಅದಕ್ಕೂ ಬಗ್ಗದೆ ಪೊಲೀಸ್ ಕಾನ್ಸ್ಟೆಬಲ್ ಸಂತೋಷ್ ಎನ್ನುವವನ ಮೇಲೆ ಮತ್ತೆ ದಾಳಿ ನಡೆಸಲೆತ್ನಿಸಿದನು. ಆಗ ಆತನ ಕಾಲಿಗೆ ಎಸ್ ಐ ಗುಂಡು ಹಾರಿಸಿ ಬಂಧಿಸಿದರು.
ಗಾಯಾಳು ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…