RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು.

ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳು ತಮ್ಮ ವಾರ್ಡ್ ನ ಬಗ್ಗೆ ಏನೆಲ್ಲಾ ಮಾತನಾಡುತ್ತಾರೆ ಎನ್ನುವುದು ಸಾರ್ವಜನಿಕರಿಗೆ ತಲುಪಲಿ ಎನ್ನುವ ಸದುದ್ದೇಶದಿಂದ  ಜಿಲ್ಲಾಧಿಕಾರಿಗಳು ಪ್ರಮುಖ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ನೇರ ಪ್ರಸಾರಕ್ಕೆ ಆದೆಶ ನೀಡಿದ್ದರು.ಆ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳ ಗ್ರಾಮಸಭೆಯನ್ನು ನೇರಪ್ರಸಾರ ಮಾಡಲಾಗಿತ್ತು. ಆ ಸಾಮಾನ್ಯ ಸಭೆಯಲ್ಲಿ‌ ಜನಪ್ರತಿನಿಧಿಗಳ ಕಾರ್ಯ ವೈಖರಿ ಮತದಾರರು ನೋಡಿ ಖುಷಿಯೂ ಪಟ್ಟಿದ್ದರೂ ಹಾಗೇ ಇಂತವರಿಗೆ ಮತ ಹಾಕಿದ್ದೆವಾ ಎಂದು ಬೇಜಾರೂ ಕೂಡ ಮಾಡಿಕೊಂಡಿದ್ದರೂ..

ಈ ತಿಂಗಳಿನ ಸಾಮಾನ್ಯ ಸಭೆಯ ನೇರಪ್ರಸಾರ ವನ್ನು ಮಾಡಲಾಗಿತ್ತು ಹಲವು ಸಾರ್ವಜನಿಕರು ಲೈವ್ ನ್ನು ವೀಕ್ಷಿಸುತಿದ್ದರು ಆದರೆ ಕಲಾಪ ನಡೆಯುವ ವೇಳೆ ಉಂಟಾದ ಕೆಲವು ಸದಸ್ಯರುಗಳ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಕೈ ಕೈ ಮಿಲಾಯಿಸುವ ಹಂತಕ್ಕೆ ತೆರಳಿದಾಗ ಅವರೇ ಆರಿಸಿ ಕಳುಹಿಸಿದ ಜನಪ್ರತಿ’ನಿಧಿ’ ಗಳು ಬೀದಿ ಬದಿಯಲ್ಲಿ ಹೊಡೆದಾಡಲು ನಿಂತ ಗೂಂಡಾಗಳಂತೆ ವರ್ತಿಸಿದ್ದು ಜನಸಾಮಾನ್ಯರಿಗೆ ತಿಳಿಯಬಾರದು ಎನ್ನುವ ಉದ್ದೇಶದಿಂದ ನೇರ ಪ್ರಸಾರದ ಕಲಾಪವನ್ನು  ಏಕ್ ದಂ ಕಟ್ ಮಾಡಿದ್ದಾರೆ.

ಕಳೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರೊಬ್ಬರು ಎಲ್ಲಾ ಸದಸ್ಯರ ಹೇಸರು ಹೇಳಿ ಲಂಚ ಪಡೆದಿದ್ದಾರೆ ಎಂದು ಯೂಟ್ಯೂಬ್ ಲೈವ್ ನಡೆಯುತಿದ್ದಾಗಲೇ ಆರೋಪ ಮಾಡಿದ್ದರು ಆ ನಂತರದಲ್ಲಿ ಆ ಬಾರ್ ಮಾಲೀಕರು ಸುದ್ದಿಗೋಷ್ಟಿ ನಡೆಸಿ ಯಾವ ಸದಸ್ಯರಿಗೂ ಲಂಚ ನೀಡಿಲ್ಲ ಎಂದು ಸ್ಪಷ್ಠಿಕರನ ನೀಡಿದ್ದರು.ಈ ವಿಚಾರವಾಗಿ ಚರ್ಚೆ ನಡೆಯುತಿದ್ದ ಸಂಧರ್ಭದಲ್ಲಿ ಏಕಾಏಕಿ‌ ಗಲಾಟೆ ಪ್ರಾರಂಭವಾಗಿದೆ.

ಹಾಗಾದರೇ ಯಾವ ಚಂದಕ್ಕೆ ನೇರ ಪ್ರಸಾರವನ್ನು ಮಾಡಿದ್ದೀರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ..? ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ವಿಚಾರದಲ್ಲಿ ಯಾಕೆ  ನೇರಪ್ರಸಾರ ಕಲಾಪ ಕಡಿತಗೊಳಿಸಿದ್ದಾರೆ ಎನ್ನುವುದೇ ಸಂಶಯವಾಗಿದೆ , ಆ ಅಧಿಕಾರಿಯ ಮೇಲೆ ಯಾರ ಒತ್ತಡವಿತ್ತೋ , ಪಾಲುದಾರಿಕೆಯಿತ್ತೋ ಅಥವಾ  ಮುಲಾಜಿಗೊಳಗಾದರೇ ಎನ್ನುವುದೇ ಪ್ರಶ್ನೆಯಾಗಿದೆ‌.

ಸರ್ಕಾರದ ಹಣದಿಂದ ಸಾಮಾನ್ಯ ಸಭೆಯ ಯೂಟ್ಯೂಬ್ ಲೈವ್ ಕಾರ್ಯಕ್ರಮ ಆಯೋಜಿಸಲಾಗಿತ್ತೇ ಹೊರತು ಯಾರಪ್ಪನ ಮನೆಯ ಹಣದಲ್ಲಿ ಅಲ್ಲ , ಅವರಿಗೆ ಬೇಕಾದಾಗ ಆನ್ ಮತ್ತು ಆಫ್ ಮಾಡಲು ಅದೇನು ಜನಪ್ರತಿನಿಧಿಗಳ ಮನೆಯ ಟಿವಿ ರಿಮೋಟ್ ಅಲ್ಲ ಈ ಘಟನೆಗೆ ಸಂಭಂಧಿಸಿದಂತೆ ಕಾರಣಕರ್ತರಾದ ಅಧಿಕಾರಿಗಳ ವಿರುದ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಒಟ್ಟಾರೆ ಗ್ರಾಮಸಭೆಗಳು , ಕೆಡಿಪಿ ಸಭೆಗಳು ಪಾರದರ್ಶಕವಾಗಿರಲಿ ಎನ್ನುವ ಸದುದ್ದೇಶದಿಂದ ಯೂಟ್ಯೂಬ್ ಲೈವ್ ವ್ಯವಸ್ಥೆಯನ್ನು ಆಯೋಜಿಸಲಾಗಿದೆ ಅದನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಯ ಕಡೆಗೆ ಹೋಗಬೇಕೆ ಹೊರತು ಜನಪ್ರತಿನಿಧಿಗಳ ದೊಂಬರಾಟ ಮುಚ್ಚಿಡಲು ಪಾರದರ್ಶಕ ವ್ಯವಸ್ಥೆಗೆ ಕುತ್ತು ತರಬಾರದು ಎನ್ನುವುದೇ ಆಶಯ….!

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

16 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago