ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ.
ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆಯ ಹಿನ್ನಲೆ :
ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.
ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೂಡಲೇ ಆತನನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…