ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ.
ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.
ದೂರಿನ ಆಧಾರದ ಮೇರೆಗೆ ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ ವಿನಯ್ ಕುಮಾರ್ ಸಿಪಿಸಿ – 1618, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ವಾಹನದ ಚಾಲಕರಾದ ಸಂತೋಷ್ ಕುಮಾರ್ ಎಪಿಸಿ ರವರುಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನನ್ನ ರಕ್ಷಿಸಿದ್ದಾರೆ. ಮನೆಯ ಬಾಗಿಲು ತೆಗೆಸಿ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕನನ್ನ ತಡೆದು ರಕ್ಷಿಸಿದ್ದಾರೆ.
ನಂತರ ವಿಚಾರ ಮಾಡಿದಾಗ ಯುವಕ ಈ ಹಿಂದೆ ಚಾಲಕ ವೃತ್ತಿ ಮಾಡುತ್ತಿದ್ದ, ಆದರೆ ಸ್ವಲ್ಪ ದಿನಗಳಿಂದ ಯಾವುದೇ ಕೆಲಸ ಇಲ್ಲದ ಕಾರಣ, ಮದ್ಯಪಾನ ಚಟ ಶುರು ಮಾಡಿ ಹಣಕ್ಕಾಗಿ ತನ್ನ ತಾಯಿಯೊಂದಿಗೆ ಜಗಳ ಮಾಡಿಕೊಂಡು, ಮನೆಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ್ದಾನೆಂದು ತಿಳಿದು ಬಂದಿದೆ. ಯುವಕನಿಗೆ ಪೊಲೀಸರು ಆತ್ಮಹತ್ಯೆ ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿ ಬಂದಿದ್ದಾರೆ.
ಕೂಡಲೇ ಕಾರ್ಯಪ್ರೌವೃತ್ತರಾಗಿ ಕರ್ತವ್ಯ ನಿಷ್ಠೆ ಮೆರೆದ ಇ.ಆರ್.ಎಸ್.ಎಸ್ – 112 ನ ಪೊಲೀಸ್ ಅಧಿಕಾರಿಗಳಿಗೆ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್