ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು
ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ.
ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.
ದೂರಿನ ಆಧಾರದ ಮೇರೆಗೆ ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ ವಿನಯ್ ಕುಮಾರ್ ಸಿಪಿಸಿ – 1618, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ವಾಹನದ ಚಾಲಕರಾದ ಸಂತೋಷ್ ಕುಮಾರ್ ಎಪಿಸಿ ರವರುಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನನ್ನ ರಕ್ಷಿಸಿದ್ದಾರೆ. ಮನೆಯ ಬಾಗಿಲು ತೆಗೆಸಿ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕನನ್ನ ತಡೆದು ರಕ್ಷಿಸಿದ್ದಾರೆ.
ನಂತರ ವಿಚಾರ ಮಾಡಿದಾಗ ಯುವಕ ಈ ಹಿಂದೆ ಚಾಲಕ ವೃತ್ತಿ ಮಾಡುತ್ತಿದ್ದ, ಆದರೆ ಸ್ವಲ್ಪ ದಿನಗಳಿಂದ ಯಾವುದೇ ಕೆಲಸ ಇಲ್ಲದ ಕಾರಣ, ಮದ್ಯಪಾನ ಚಟ ಶುರು ಮಾಡಿ ಹಣಕ್ಕಾಗಿ ತನ್ನ ತಾಯಿಯೊಂದಿಗೆ ಜಗಳ ಮಾಡಿಕೊಂಡು, ಮನೆಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ್ದಾನೆಂದು ತಿಳಿದು ಬಂದಿದೆ. ಯುವಕನಿಗೆ ಪೊಲೀಸರು ಆತ್ಮಹತ್ಯೆ ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿ ಬಂದಿದ್ದಾರೆ.
ಕೂಡಲೇ ಕಾರ್ಯಪ್ರೌವೃತ್ತರಾಗಿ ಕರ್ತವ್ಯ ನಿಷ್ಠೆ ಮೆರೆದ ಇ.ಆರ್.ಎಸ್.ಎಸ್ – 112 ನ ಪೊಲೀಸ್ ಅಧಿಕಾರಿಗಳಿಗೆ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…