ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು. ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ ಅವರ ನೇತೃತ್ವದಲ್ಲಿ ಸರ್ಪವನ್ನು ಹುಡುಕಿ ಹಿಡಿದು ಅದರ ಸ್ವಾಭಾವಿಕ ವಾಸಸ್ಥಾನಕ್ಕೆ ಬಿಡಲಾಯಿತು.
ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂತೋಷ್ ಜಿ. ಮಲ್ಲನಗೌಡ್ ಮತ್ತು ಅರಣ್ಯ ಸಿಬ್ಬಂದಿ ಭಾಗವಹಿಸಿದ್ದರು.
ಕಾಳಿಂಗ ಸರ್ಪ ವಿಷಪೂರಿತ ಹಾವುಗಳಲ್ಲಿ ಅತಿ ಉದ್ದವಾದ ಪ್ರಭೇದವಾಗಿದೆ. ಇದು 18 ಅಡಿ ವರೆಗೆ ಬೆಳೆಯುವ ಈ ಹಾವು ಇತರೆ ಹಾವುಗಳು, ಹಲ್ಲಿ ಮತ್ತು ಸಣ್ಣ ಕ್ರಿಮಿಕೀಟಗಳನ್ನು ತಿನ್ನುತ್ತದೆ. ಇದು ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಕಾಡುಗಳಲ್ಲಿ ಕಂಡುಬರುತ್ತದೆ.