ಆಗುಂಬೆಯಲ್ಲಿ 184 ಮಿಮೀ ಮಳೆ : ತುಂಗಾ ಜಲಾಶಯ ಭರ್ತಿ
ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ.
ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8 ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇದು ಬಿಟ್ಟರೆ ಕೊಡಗಿನ ಭಾಗಮಂಡಲದಲ್ಲಿ 168 .2 ಮಿಮಿ ಮಳೆಯಾಗಿದೆ.
ಜಿಲ್ಲೆಯಲ್ಲಿ ಪ್ರಮುಖ ಜಲಾಶಯಗಳಾದ ತುಂಗ, ಭದ್ರ ಮತ್ತು ಲಿಂಗನಮಕ್ಕಿಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ತುಂಗ ಜಲಾಶಯ ಭರ್ತಿಯಾಗಿ ನದಿಗೆ ನೀರು ಹರಿಸಲಾಗಿದೆ. 588.24 ಅಡಿ ಜಲಾಶಯದ ಸಾಮರ್ಥ್ಯವಿದ್ದು 588.24 ಅಡಿ ನೀರು ಸಂಗ್ರಹವಾಗಿದೆ. ಭದ್ರದಲ್ಲಿ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 136 ಅಡಿ ನೀರು ಸಂಗ್ರಹವಾಗಿದೆ. ಲಿಂಗನಮಕ್ಕಿಗೆ 10,900 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
1819 ಅಡಿ ಸಾಮರ್ಥ್ಯ ಲಿಂಗನ ಮಕ್ಕಿಯಲ್ಲಿ ಇಂದು 1764 ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ ಅಂತ್ಯಕ್ಕೆ ಜಲಾಶಯದ ಸಾಮರ್ಥ್ಯ ಇಷ್ಟಿತ್ತೆಂದು ತಿಳಿದುಬಂದಿದೆ.
ಮುಂಗಾರು ಚುರುಕಾಗುವ ಸಾಧ್ಯತೆ
ಮಲೆನಾಡು ಮತ್ತು ಕರಾವಳಿಯಲ್ಲಿ ಮುಂದಿನ ಮೂರು ದಿನ ಮುಂಗಾರು ಚುರುಕಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…