POSTMANNEWS

ನೈಜ ಸುದ್ದಿ ನೇರ ಬಿತ್ತರ..

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ.

ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ ಕಬ್ಬಿಣದ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಕೆರೆ ಏರಿ ಮೇಲೆ ಹೋಗುತ್ತಿರುವಾಗ ಎದುರಿನಿಂದ ಬಂದ ವಾಹನ ಸೈಡ್ ನೀಡದೇ ಇದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಈ ಘಟನೆಯಲ್ಲಿ ಬೈಕ್ ನ ಹಿಂಬದಿ ಸವಾರನಿಗೂ ಕಾಲು ಮತ್ತು ಕೈಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿರಿಸಲಾಗಿದೆ.

ರಿಪ್ಪನ್ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *