ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ.
ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ ಕಬ್ಬಿಣದ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಕೆರೆ ಏರಿ ಮೇಲೆ ಹೋಗುತ್ತಿರುವಾಗ ಎದುರಿನಿಂದ ಬಂದ ವಾಹನ ಸೈಡ್ ನೀಡದೇ ಇದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಈ ಘಟನೆಯಲ್ಲಿ ಬೈಕ್ ನ ಹಿಂಬದಿ ಸವಾರನಿಗೂ ಕಾಲು ಮತ್ತು ಕೈಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿರಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…