ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು.
ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4) ಬಿಎನ್ಎಸ್ 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.
ಈ ಪ್ರಕರಣದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…