BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ
ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @ ಚರಣ್ ಎಂಬುವವರನ್ನು ಬಂಧಿಸಲಾಗಿದೆ.
ಬಂಧಿತರು ಬಂಕಾಪುರ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದರು.19-04-2025 ರಂದು ಬಂಕಾಪುರ ಪಟ್ಟಣದ ಶಹಾಬಾನು ಎಂಬುವವರ ನೆಕ್ಲೇಸ್ ಬಸ್ ನಿಲ್ದಾಣದಲ್ಲಿ ಕಳ್ಳತನವಾಗಿತ್ತು ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎಸ್ ಪಿ ಅಂಶುಕುಮಾರ್ , ಹೆಚ್ಚುವರಿ ಎಸ್ ಪಿ ಎಲ್ ವೈ ಶಿರಕೊಳ , ಡಿ ಎಸ್ ಪಿ ಗುರುಶಾಂತಪ್ಪ ಸಿಪಿಐ ಅನಿಲ್ ರಾಠೊಡ ಮಾರ್ಗದರ್ಶನದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ಹಾಗೂ ಪಿಎಸೈ-2 ಎಸ್ ಎಮ್ ವನಹಳ್ಳಿ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಪೊಲೀಸರ ತನಿಖಾ ತಂಡ ಅಂತರ ಜಿಲ್ಲಾ ಇಬ್ಬರು ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಐ ಕೆ ರಜನಿ , ಎಂ ಕೆ ನದಾಪ್ ,ವೆಂಕಟೇಶ್ ಲಮಾಣಿ ,ಬೀರಪ್ಪ ಕಳ್ಳಮನಿ , ನಿಂಗಪಪ್ ಪೂಜಾರ ,ಕಮಲಾಕ್ಷಿ ಅಲಗೋಡ ,ಶಿಲ್ಪಾ ಕ್ಯಾಶನಕೇರಿ ,ನೇತ್ರಾ ಚವಡಿ ಹಾಗೂ ಮಾರುತಿ ಇದ್ದರು.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…