ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು.
ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್ ಕಂಬಗಳು ಹಾಗೂ ಮರಗಳು, ತೆಂಗಿನಮರ ಧರಾಶಾಹಿ ಘಟನೆ, ಅನೇಕ ಮನೆಗಳ ಹೆಂಚುಗಳು, ಶೀಟುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿತ್ತು.ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮರ, ವಿದ್ಯುತ್ ಕಂಬಗಳು ರಸ್ತೆ ಮೇಲೆ ಉರುಳಿ ಬಿದ್ದ ಕೆಲಕಾಲ ಹೊಸನಗರ – ರಿಪ್ಪನ್ಪೇಟೆ ಸಂಚಾರ ಅಸ್ತವ್ಯಸ್ತವಾಗಿತ್ತು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷರು , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಮುಖಂಡರಾದ ಬಿ ಪಿ ರಾಮಚಂದ್ರ, ಈಶ್ವರಪ್ಪ ಗೌಡ , ಮಧುಸೂಧನ್ , ಆಸಿಫ಼್ ಭಾಷಾ , ರವೀಂದ್ರ ಕೆರೆಹಳ್ಳಿ ,ನಿರೂಪ್ ಕುಮಾರ್ , ಚಂದ್ರೇಶ್ , ಚಿಂತು ,ಗಣಪತಿ ಗವಟೂರು , ಮಲ್ಲಿಕಾರ್ಜುನ್ , ಮಂಜುಳಾ ಕೆ ರಾವ್ ,ಶ್ರೀಧರ್ , ರಾಜು ಗೌಡ , ವಿಶ್ವಾಸ್ ಹೊಸನಗರ ಹಾಗೂ ಪಿಡಿಓ ನಾಗರಾಜ್ ಇದ್ದರು.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…