ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್ಐ ಗುಂಡು ಹಾರಿಸಿದ್ದಾರೆ.
ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿ ಹನುಮಂತ ಅಮಾಥಿ ಮೇಲೆ ಚಾಕುವಿನ ಹಲ್ಲೆ ನಡೆಸಿದ್ದಾನೆ. ಈ ಸಂಧರ್ಭದಲ್ಲಿ ಆತ್ಮರಕ್ಷಣೆಗಾಗಿ ಹೊಸಮನೆ ಪಿಎಸೈ ಕೃಷ್ಣಕುಮಾರ್ ಪಿ ಮಾನೆ ಆರೋಪಿ ಅರುಣ್ ಕುಮಾರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ.
ಗಾಯಗೊಂಡ ಕೊಲೆ ಆರೋಪಿಗೆ ಭದ್ರಾವತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.