ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಿನಾಂಕ 17.05.2025 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿಗಳಾದ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಇವರು ತಮ್ಮ ಮೋಟಾರ್ ಸೈಕಲ್ ಮೇಲೆ ಅವರ ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್​ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿದ್ದಾಳೆ ಎಂಬ ಅಪಘಾತದ ದೃಶ್ಯ ಸೃಷ್ಟಿಸಿದ್ದಾರೆ.

ಆದರೆ ಪೊಲೀಸ್‌ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಕೊಲೆ ಎಸಗಲಾಗಿದ್ದು, ಇದರಲ್ಲಿ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಹೊನಕಾಂಡೆ ಕೈವಾಡ ಕಂಡುಬಂದಿದ್ದರಿಂದ ಮತ್ತು ಕೊಲೆಗೆ ಆರೋಪಿತರ ಮಗ ಸಂತೋಷ್ ಬೆಂಬಲ ನೀಡಿದ್ದು ತಿಳಿದು ಬಂದಿದೆ. ಅಥಣಿ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

19 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

19 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

19 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago