ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು
ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು
ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು
ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ.
ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಿನಾಂಕ 17.05.2025 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿಗಳಾದ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಇವರು ತಮ್ಮ ಮೋಟಾರ್ ಸೈಕಲ್ ಮೇಲೆ ಅವರ ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿದ್ದಾಳೆ ಎಂಬ ಅಪಘಾತದ ದೃಶ್ಯ ಸೃಷ್ಟಿಸಿದ್ದಾರೆ.
ಆದರೆ ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಕೊಲೆ ಎಸಗಲಾಗಿದ್ದು, ಇದರಲ್ಲಿ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಹೊನಕಾಂಡೆ ಕೈವಾಡ ಕಂಡುಬಂದಿದ್ದರಿಂದ ಮತ್ತು ಕೊಲೆಗೆ ಆರೋಪಿತರ ಮಗ ಸಂತೋಷ್ ಬೆಂಬಲ ನೀಡಿದ್ದು ತಿಳಿದು ಬಂದಿದೆ. ಅಥಣಿ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…