ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬಾಳೂರು ಬೋರ್ಡ್ ಗಲ್ ನಿಂದ ಕಾಳೇಶ್ವರ ಸಂಪರ್ಕ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ಬಾಳೂರು ಗ್ರಾಮ ಪಂಚಾಯಿತ್ ಕಾರ್ಯಾಲಯದಲ್ಲಿ ಗ್ರಂಥಾಲಯದ “ಅರಿವಿನ ಕೇಂದ್ರವನ್ನು’’ಉದ್ಘಾಟಿಸಿ ಮಾತನಾಡಿ
ಚುನಾವಣೆಯ ನಂತರ ಗ್ರಾಮ ಪಂಚಾಯಿತ್ ಅಡಳಿತ ಮಂಡಳಿಯವರು ಗ್ರಂಥಾಲಯ ಕಟ್ಟಡಕ್ಕೆ ಅನುದಾನ ಕೊಡಿಸುವಂತೆ ಮನವಿ ಸಲ್ಲಿಸಿದರು ಅದರಂತೆ ಸರ್ಕಾರದಿಂದ 5 ಲಕ್ಷ ರೂ ಅನುದಾನವನ್ನು ಬಿಡುಗಡೆಗೊಳಿಸಲಾಗಿ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಇಂದು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ.ಇದರೊಂದಿಗೆ ಅರಿವಿನ ಕೇಂದ್ರಕ್ಕೆ  ಸಾರ್ವಜನಿಕರ ಸಹಕಾರ ಪಡೆದು ಅಗತ್ಯವಿರುವಂತಹ ಲೇಖಕರ ಸಾಹಿತಿಗಳ ಪುಸ್ತಕಗಳನ್ನು ದೇಣಿಗೆ ರೂಪದಲ್ಲಿ ಸಂಗ್ರಹಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನಾರ್ಜನೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ಸಂಘದವರು ನಮಗೆ ಸ್ರಿö್ತ ಶಕ್ತಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸಿ ಎಂದು ಶಾಸಕರಲ್ಲಿ ಮನವಿ ಸಲ್ಲಿಸಲಾಗಿ ತಕ್ಷಣ ಶಾಸಕರು ತಮ್ಮ ಸಂಘ ನೋಂದಣಿಯಾಗಿರಬೇಕು ಮತ್ತು ಪಂಚಾಯಿತ್ ವ್ಯಾಪ್ತಿಯಲ್ಲಿ ಖಾಲಿ ಜಾಗ ನಿಮ್ಮ ಸಂಘದ ಹೆಸರಿನಲ್ಲಿ ಮಂಜೂರಾಗಿರಬೇಕು ಇಲ್ಲದೇ ಇದ್ದರೆ ಹಣ ವಾಪಾಸ್ಸು ಹೋಗುತ್ತದೆ ಇದನ್ನು ಮನಗಂಡು ತಾವು ಕೇಳಿದಂತೆ ಅನುದಾನ ಕೊಡಿಸಲು ನಾನು ಸದಾ ಸಿದ್ದವಿರುವುದಾಗಿ ಮಹಿಳೆಯವರಿಗೆ ಮನವರಿಕೆ ಮಾಡಿಕೊಟ್ಟರು.

ನಮಗೂ ಶಕ್ತಿ ಯೋಜನೆ ಸೌಲಭ್ಯ ಕಲ್ಪಿಸಿ:-

ಸಾಗರ-ತೀರ್ಥಹಳ್ಳಿ ಮತ್ತು ಹೊಸನಗರ-ಶಿವಮೊಗ್ಗ ಮಾರ್ಗದಲ್ಲಿ  ರಾಜ್ಯ ಸರ್ಕಾರಿ ಬಸ್‌ಗಳನ್ನು ಬಿಡುವ ಮೂಲಕ ಸರ್ಕಾರದ ಶಕ್ತಿ ಯೋಜನೆಯ ಸೌಲಭ್ಯ ಕಲ್ಪಿಸಿ ಎಂದು ಮಹಿಳೆಯರು ಶಾಸಕರಲ್ಲಿ ಮನವಿ ಮಾಡಿದರು.ಅಗ ಶಾಸಕರು ಶೀಘ್ರದಲ್ಲಿ ಸಾಗರ ಆನಂದಪುರ ರಿಪ್ಪನ್‌ಪೇಟೆ ತೀರ್ಥಹಳ್ಳಿ ಮಾರ್ಗ ಹೊರನಾಡು ಶೃಂಗೇರಿ ಧರ್ಮಸ್ಥಳ ಸುಬ್ರಮಣ್ಯ ಮತ್ತು ಸಾಗರ ಮಣಿಪಾಲ ಚಿಕ್ಕಮಂಗಳೂರು ಮಾಗವಾಗಿ ಸರ್ಕಾರಿ ಬಸ್ ಓಡಿಸಲಾಗುವುದೆಂದು ಭರವಸೆ ನೀಡಿದರು.

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಬಳಕೆಗೆ ಸೂಚನೆ;-

ಕೇಂದ್ರ ಸರ್ಕಾರ ಖಾತ್ರಿ ಯೋಜನೆ ಕಡಿತಗೊಳಿಸಿದೆ ಆದ್ದರಿಂದ ರಾಜ್ಯ ಸರ್ಕಾರವೇ ಖಾತ್ರಿ ಯೋಜನೆಯನ್ನು ಮುಂದುವರಿಸಿ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದ್ದು ರೈತರು ಅಡಿಕೆ ತೋಟ ನಿರ್ಮಾಣ ಸೇರಿದಂತೆ ಇತರ ವಯಕ್ತಿಕ ಕಾಮಗಾರಿ ನಿರ್ವಹಿಸಿಕೊಳ್ಳುವ ಮೂಲಕ ಆಭಿವೃದ್ದಿ ಹೊಂದಲು ಕರೆ ನೀಡಿ ತೋಟಗಾರಿಕೆ ಇಲಾಖೆಯ ಮೂಲಕ ಕಾಮಗಾರಿ ಮಾಡದೆ ನೇರವಾಗಿ ಗ್ರಾಮಾಡಳಿತದ ಮೂಲಕ ಆಡಿಕೆ ತೋಟ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಅನುಮತಿ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದರು.

ಈಗಾಗಲೇ ಸಾಗರ -ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಹಾಳಾಗಿ ಓಡಾಡದಂತಾಗಿದವು ಕೇವಲ ಎರಡು ವರ್ಷದ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳಿಗೆ ಅನುದಾನ ನೀಡುವ ಮೂಲಕ ಅಭಿವೃದ್ದಿ ಪಡಿಸಲಾಗಿದ್ದು ಕೆಲವು ರಸ್ತೆಗಳು ಕಾಂಕ್ರೇಟ್ ರಸ್ತೆಗಲಾಗಿ ಮತ್ತು ಇನ್ನೂ ಕೆಲವು ರಸ್ತೆಗಳನ್ನು ಡಾಂಬರೀಕರಣ ರಸ್ತೆಯನ್ನಾಗಿ ಅಭಿವೃದ್ದಿ ಪಡಿಸಲಾಗಿದೆ ಇನ್ನೂ ಆನಂದಪುರA-ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯ ಒಟ್ಟು 27 ಕೋಟಿ ರೂ ಅನುದಾನದೊಂದಿಗೆ ದ್ವಿಪಥ ರಸ್ತೆ ಆಭಿವೃದ್ದಿ ಕಾಮಗಾರಿ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು.

ಬಾಳೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀನಿವಾಸ ಅಚಾರ್ ಆಧ್ಯಕ್ಷತೆ ವಹಿಸಿದ್ದರು.

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರುಮೌಳಿಗೌಡರು,ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪಗೌಡ, ಗ್ಯಾರಂಟಿ ಯೋಜನೆಯ ತಾಲ್ಲೂಕ್ ಆಧ್ಯಕ್ಷ ಚಿದಂಬರ್, ಮೆಸ್ಕಾಂ ಇಲಾಖೆಯ ಸಹಾಯಕ ಕಾಯಾಪಾಲಕ ಅಭಿಯಂತರ  ಚಂದ್ರಶೇಖರ್, ಬಾಳೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ರಾಜುಗೌಡ,ದಿವಾಕರ,ಶಿವಮ್ಮ,ಲೀಲಾವತಿ,ಪಾರ್ವತಮ್ಮ,ರೇಖಾ,ಶಶಿಕಲಾ,ಬಾಳೂರು ಘಟಕದ ಕಾಂಗ್ರೆಸ್ ಅಧ್ಯಕ್ಷ ಸಂತೋಷ(ಚಿಂಟು), ಸಣ್ಣಕ್ಕಿ ಮಂಜು, ಶಿವು ವಡಾಹೊಸಳ್ಳಿ,ಉಮಾಕರ್ ತಮ್ಮಡಿಕೊಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ, ಗಣಪತಿಗವಟೂರು,ಪ್ರಕಾಶಪಾಲೇಕರ್,ಮಹಾಲಕ್ಷಿö್ಮ, ಸಾರಾಭಿ, ಆಶೀಫ್ ಭಾಷಾ, ಆರ್.ವಿ.ನಿರೂಫ್ ಕುಮಾರ್,ರವೀಂದ್ರಕೆರೆಹಳ್ಳಿ, ಇನ್ನಿತರ ಮುಖಂಡರು ಪಾಲ್ಗೊಂಡಿದರು.

ರಿಪ್ಪನ್‌ಪೇಟೆ : ಶತಾಯುಷಿ ಕಲ್ಲೂರು ನಾಗಮ್ಮ (102)

ರಿಪ್ಪನ್‌ಪೇಟೆ;-ಶತಾಯುಷಿ ಕಲ್ಲೂರು ನಾಗಮ್ಮ (102) ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ.

ಮೃತರಿಗೆ ಎರಡು ಗಂಡು ಏಳು ಹೆಣ್ಣುಮಕ್ಕಳು ಇದ್ದಾರೆ.
ಮೃತರ ಅಂತ್ಯಕ್ರಿಯೆ ಕಲ್ಲೂರು ಗ್ರಾಮದಲ್ಲಿ ಜರುಗಿತು.

ಸಂತಾಪ;-ಶತಾಯುಷಿ ಕಲ್ಲೂರು ನಾಗಮ್ಮ ನಿಧನಕ್ಕೆ ಕಲ್ಲೂರು ಶಾಂತವೇರಿ ಗೋಪಾಲಗೌಡ ಸಮಾಜ ವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago