ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್
ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ.
ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್ ಯಾನೆ ಯಾನೆ ಉಮ್ಮರ್, ಮಧುಸೂಧನ್, ಅಲಿಯಾಸ್ ಅಲಿಯಾಸ್ ಕರಿಯಾ, ಮಧು ಮತ್ತು ಆಂಜನೇಯ ಎಂಬುವರು ಹಂದಿ ಅಣ್ಣಿಯ ಕೊಲೆ ಆರೋಪಿಗಳಾಗಿದ್ದಾರೆ. ಮಧು ಈ ಪ್ರಕರಣ ನಡೆಯುವಾಗಲೆ ಕೊಲೆಯಾಗಿದ್ದನು. 2024ರಲ್ಲಿ ಹೊನ್ನಾಳಿ ತಾಲೂಕಿನಲ್ಲಿ ಕೊಲೆ ಮಾಡಲಾಗಿತ್ತು. ಉಳಿದ ಏಳು ಜನರ ವಿರುದ್ಧ ಕೊಲೆ ಆರೋಪದ ತೂಗುಗತ್ತಿಯಿಂದ ತಪ್ಪಿಸಿಕೊಂಡಿದ್ದಾರೆ. ಕೊಲೆಗೆ ಸಾಕ್ಷಿ ಇಲ್ಲದ ಕಾರಣ ಪ್ರಕರಣ ಖುಲಾಸೆಯಾಗಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗದಲ್ಲಿ 2024 ಜುಲೈ 14 ರಂದು ಹೊನ್ನಪ್ಪ ಯಾನೆ ಹಂದಿ ಅಣ್ಣಿಯ ಕೊಲೆಯಾಗುತ್ತಿದ್ದಂತೆ ಕಾಡ ಕಾರ್ತಿಕ್ ಮತ್ತು ಆತನ ಗ್ಯಾಂಗ್ ಚಿಕ್ಕಮಗಳೂರಿನಲ್ಲಿ ಪೊಲೀಸರ ಬಳಿ ಸರೆಂಡರ್ ಆಗಿದ್ದರು. ಅವರನ್ನ ಶಿವಮೊಗ್ಗಕ್ಕೆ ತಂದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಕೋರ್ಟ್ ಕಲಾಪದ ನಡುವೆ 2024 ರಲ್ಲಿ ಮಧು ಎಂಬಾತನನ್ನ ಕೊಲೆ ಮಾಡಲಾಗಿತ್ತು. ಇದಾದ ನಂತರ ಮಾ.17 ರಂದು ಕೊಲೆ ಆರೋಪಿಗಳ ಮೇಲೆ ದಾಳಿ ನಡೆಸಲು ಯತ್ನಿಸಿ ಮೂವರು ಬಂಧಿತರಾಗಿದ್ದರು. ವಿನೋಬ ನಗರದ ಮಲ್ಲೇಶ್, ಕಾಶೀಪುರದ ರಾಕೇಶ್, ಮೇದಾರಕೇರಿಯ ಗುರುಮೂರ್ತಿ, ಹಾಗೂ ವಿನಯ್ ಎಂ ಎಂಬಾತನನ್ನ ಬಂಧಿಸಿ ಜಯನಗರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು.
ಚಂದನ್, ಫಾರೂಕ್, ಮದನ್ ರಾಜ್, ಮಧುಸೂದನ್ ಮತ್ತು ಮದು ಎಂಬ ಐವರು ಹಾಜರಾಗಬೇಕಿತ್ತು. ನಂಬರ್ ಪ್ಲೇಟ್ ಇಲ್ಲದ ಡಿಯೋ ಗಾಡಿ ತಂದು ಕೋರ್ಟ್ ನಲ್ಲಿ ನುಗ್ಗಿಸಿ ಐವರ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಅಡ್ಡಗಟ್ಟಿದ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಮಾರಕಾಸ್ತ್ರಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಗುರುಮೂರ್ತಿ ಬಳಿ 9.6 ಫೊಲ್ಡಿಂಗ್ ಚಾಕು ಪತ್ತೆಯಾಗಿತ್ತು.
ಇದಾದ ನಂತರ ಮೇ.2 ರಂದು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…