ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು
ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು
ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು
ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆಯ ಬುಕ್ಕಂಬೂದಿಯಿಂದ ಸಾಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಅಸ್ಮಾಭಾನು (30) ಮತ್ತು ಮೂರು ವರ್ಷದ ಮಗು ಮೊಹ್ಮದ್ ಖಬೀರ್ ಸಾವುಕಂಡಿದ್ದಾರೆ.
ದ್ವಿಚಕ್ರವಾಹನವನ್ನ ಓಡಿಸುತ್ತಿದ್ದ ಖಲಂದರ್ ಪಾಶ ಅವರಿಗೆ ಏಕಾಏಕಿ ಹಿಂಬದಿಯಲ್ಲಿದ್ದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮೂರು ವರ್ಷದ ಮಗು ಮೊಹ್ಮದ್ ಖಬೀರ್ ಸಾವನ್ನಪ್ಪಿದರೆ. ಸಾಗರದಲ್ಲಿ ಪ್ರಾರ್ಥನಾ ಮಂದಿರಕ್ಕೆ ನಾಲ್ವರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು.
ತಾಯಿ ಅಸ್ಮಾ ಭಾನು, ತಂದೆ ಖಲಂದರ್ ಮತ್ತೋರ್ವ 6 ವರ್ಷದ ಸಹೋದರ ಗಂಬೀರ ಗಾಯವಾಗಿದ್ದು ತಕ್ಷಣ ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಅಸ್ಮಭಾನು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ.
6 ವರ್ಷದ ಗಂಡು ಮಗು ಮತ್ತು ಖಲಂದರ್ ಅವರನ್ನ ಮೆಗ್ಗಾನ್ ಗೆ ಕರೆತರಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಖಲಂದರ್ ಗೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕುಂಸಿ ಠಾಣ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…