HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಮುಖ್ಯಬಸ್ ನಿಲ್ದಾಣದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಹಾಗೂ ಮೆರೆವಣಿಗೆ ಮೂಲಕ ಸಾಗಿ ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರಾದ ಉಮೇಶ್ ಕಂಚುಗಾರ್, ಸುಭ್ರಹ್ಮಣ್ಯ ಕೆ ವಿ, ಸುರೇಶ್ ಸ್ವಾಮಿರಾವ್, ನಗರ ನಿತಿನ್, ಆಲುವಳ್ಳಿ ವಿರೇಶ್, ಎಂ ಎನ್ ಸುಧಾಕರ್, ಧನ್ಯಶ್ರಿ ರಮೇಶ್, ಸುಧೀಂದ್ರ ಪಂಡಿತ್ ಹಾಗೂ ಹಲವರು ಉಪಸ್ಥಿತರಿದ್ದರು.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…