ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು.

ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿ ತೋರಿಸಲು ಮುಂದಾಯಿತು.

ಭಾರತದ 15 ಸ್ಥಳಗಳನ್ನು ಗರಿಯಾಗಿಸಿಕೊಂಡು ದಾಳಿ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ಮಾಡಲು ಪಾಕಿಸ್ತಾನ ಪ್ಲಾನ್‌ ಮಾಡಿಕೊಂಡಿದ್ದು, ಈ ಪ್ಲಾನ್‌ ಅನ್ನು ಭಾರತೀಯ ಸೇನೆ ಉಲ್ಟಾ ಮಾಡಿ ಅವರ ದೇಶಕ್ಕೆ ನುಗ್ಗಿ ಅಲ್ಲಿನ 12ಕ್ಕೂ ಹೆಚ್ಚು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿ ಗೂಸಾ ನೀಡಿತು. ಇದರ ಬೆನ್ನಲ್ಲೇ ದೇಶದ ಪ್ರಮುಖ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕಾವಾಗಿ ಬಂದ್‌ ಮಾಡಲಾಗಿದೆ. ಇದರಿಂದ ಐಪಿಎಲ್‌ ರದ್ದಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಯಾಕೆಂದ್ರೆ, ಐಪಿಎಲ್‌ ಪಂದ್ಯಗಳನ್ನು ಆಡಲು ಒಂದೆಡೆಯಿಂದ ಮತ್ತೊಂದೆಡೆ ಪ್ರಯಾಣ ಮಾಡಲೇಬೇಕಾಗುತ್ತದೆ. ಇದೀಗ ವಿಮಾನಗಳನ್ನು ರದ್ದು ಮಾಡಿರುವ ಕಾರಣ ಪಂದ್ಯಗಳು ರದ್ದಾಗಲೂಬಹುದು ಅಥವಾ ದಿನಾಂಕ ಮುಂದೂಡಿಕೆಯಾಗಲೂಬಹುದು ಅಥವಾ ಸ್ಥಳ ಬದಲಾವಣೆಯಗಲೂಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಮೇ 11ರಂದು ನಡೆಯುವ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡದ ಸ್ಥಳವನ್ನು ಕೂಡ ಬದಲಾಯಿಸಲಾಗಿದೆ.

ಆದರೆ, ಕೆಲವೆಡೆ ವಿಮಾನ ಸೇವೆ ಬಂದ್‌ ಮಾಡಿರುವ ಕಾರಣ, ವಿಮಾನಗಳು ರದ್ದಾಗಲೂಬಹುದು ಅಥವಾ ಮುಂದೂಡಿಕೆಯಾಗಲೂಬಹದು. ಮತ್ತೊಂದೆಡೆ ಆಟಗಾರರ ರಕ್ಷಣೆ ಮಾಡುವುದು ಕೂಡ ಪ್ರಮುಖ ಕರ್ತವ್ಯವಾಗಿದೆ. ಅವರು ಬೇರೆ ದೇಶಗಳಿಂದ ಬಂದು ಇಲ್ಲಿ ಆಡುವುದರಿಂದ ಅವರ ರಕ್ಷಣೆ ಅತ್ಯಗತ್ಯವಾಗಿರುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಅಂದರೆ, ಪಂದ್ಯ ರದ್ದು ಮಾಡುವ ನಿರ್ಧಾರ ತೆಗೆದುಕೊಂಡರೂ ತೆಗೆದುಕೊಳ್ಳಬಹುದು ಹೇಳುವುದಕ್ಕೆ ಆಗುವುದಿಲ್ಲ.

ಐಪಿಎಲ್‌ 2025ರ ಸೀಸನ್‌ ಅಂತಿಮ ಹಂತದಲ್ಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಐಪಿಎಲ್‌ ಯಾವುದೇ ತೊಂದರೆಗಳಿಲ್ಲದೆ ಮುಕ್ತಾಯವಾಗಬೇಕೆನ್ನುವುದೇ ಎಲ್ಲರ ಆಶಯವಾಗಿದೆ

ಪೆಹಲ್ಗಾಮ್‌ ದಾಳಿಗೆ ಪ್ರತಿಕಾರವಾಗಿ ‘ಆಪರೇಷನ್‌ ಸಿಂಧೂರ್’ ಕಾರ್ಯಾಚರಣೆ ಮೂಲಕ ಪಾಕ್‌ನಲ್ಲಿನ 9 ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ಕ್ಷಿಪಣಿ ದಾಳಿ ನಡಸಿತ್ತು. ಇದರ ಬೆನ್ನಲ್ಲೇ ಇದೀಗ ಪರಿಸ್ಥಿತಿ ಕ್ಷಣ-ಕ್ಷಣಕ್ಕೂ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿರುವ ಐಪಿಎಲ್‌ನ 18ನೇ ಆವೃತ್ತಿ ಪಂದ್ಯಗಳು ರದ್ದಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

52 minutes ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

3 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

3 hours ago

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು!

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a…

3 hours ago

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

21 hours ago