ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ.

ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ.

ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು ಎಂದು ವಿಚಾರಣೆ ವೇಳೆ ಆಕೆಯೇ ಬಾಯ್ಬಿಟ್ತಿದ್ದಾಳೆ ಎನ್ನಲಾಗಿದೆ.

ಅಲ್ಲದೇ ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ.

ನೇಪಾಳಕ್ಕೆ ಭೇಟಿ ನೀಡಿದ್ದ ಜ್ಯೋತಿ ಪಾಕಿಸ್ತಾನ ರಾಯಭರ ಕಚೇರಿಗೆ ಹೋಗಿದ್ದಳು. ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ಅಲ್ಲಿಂದ ವಿಡಿಯೋ ಮಾಡಿ ತನ್ನ ಯೂಟ್ಯೂಬ್ ಚಾನಲ್ ಗೆ ಅಪ್ ಲೋಡ್ ಮಾಡಿದ್ದಳು. ಪಾಕಿಸ್ತಾನ ರಾಯಭಾರ ಕಚೇರಿಗೆ ಆಕೆ ಭೇಟಿ ಕೊಟ್ಟಾಗ ಡ್ಯಾನಿಶ್ ತುಂಬಾ ಸ್ನೇಹಪರ ವ್ಯಕ್ತಿಯಂತೆ ಆಕೆನ್ನು ಸ್ವಾಗತಿಸಿದ್ದ.

ಇನ್ನು ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ ನೀಡಿದ್ದಳು. ಪಹಲ್ಗಾಮ್ ಗೆ ಯಾವ ಮಾರ್ಗವಾಗಿ ಬರಬೇಕು? ಬಳಿಕ ಎಲ್ಲಿಗೆ ಭೇಟಿ ನೀಡಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜ್ಯೋತಿ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ವಿವರಿಸಿದ್ದಳು.

ಪಹಲ್ಗಾಮ್, ಆರುಬೆತಾಪ್, ಚಂದನ್ ವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವಿವರಿಸಿದ್ದಳು. ಜ್ಯೋತಿ ಮಲ್ಹೋತ್ರಾ ಚೀನಾಗೆ ಭೇಟಿ ನೀಡಲು ತೆರಳಿದ್ದ ವೇಳೆ ಭದ್ರತಾ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಮೂಲಕ ಆಕೆಯ ಮೇಲೆ ನಿಗಾ ಇಡಲಾಗಿತ್ತು. ಸಧ್ಯ ಜ್ಯೋತಿ ಮಲ್ಹೋತ್ರಾ ಬಂಧನವಾಗಿದ್ದು ತನಿಖೆ ಮುಂದುವರೆದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

55 minutes ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

24 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

24 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago