ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ

ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ ಕೆಲಸಗಾರ ಸತೀಶ್ ಪೂಜಾರ್ ರವರ ಐದು ವರ್ಷದ ಮಗಳು ಆದ್ಯ ಚಿಕಿತ್ಸೆಗೆ ತಾಲೂಕ್ ಕಟ್ಟಡ ಕಾರ್ಮಿಕರ ಸಂಘ ಹಾಗೂ ರಿಪ್ಪನ್ ಪೇಟೆ ಪೊಲೀಸರು ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

“ಇದು ಬಹಳ ಅಪರೂಪದ ಜೆನೆಟಿಕಲ್‌ ಡಿಸಾರ್ಡೆರ್‌ ಆಗಿದ್ದು, ಮಗುವಿನ ದೇಹದಲ್ಲಿ ರಕ್ತ ಉತ್ಪಾದನೆಯಾಗುತ್ತಿಲ್ಲ ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದ್ದು ಮಗು ಈ ಆರೋಗ್ಯ ಸಮಸ್ಯೆಯಿಂದ ಗುಣವಾಗುವ ಎಲ್ಲಾ ಸಾಧ್ಯತೆಗಳಿದೆ. ಆದ್ರೆ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಬೇಕಾದಂತಹ ಮೊತ್ತ ಕೇಳಿದರೆ ಮೈ ಜುಮ್‌ ಎನ್ನುತ್ತದೆ. ಈ ವೈದ್ಯಕೀಯ ಚಿಕಿತ್ಸೆಗೆ ಬೇಕಾಗಿರುವುದು ಸುಮಾರು ನಲವತ್ತು ಲಕ್ಷ ರೂಪಾಯಿ ಆದರೆ ಗಾರೆ ಕೆಲಸ ನಿರ್ವಹಿಸುವ ಮಗುವಿನ ತಂದೆ ತಾಯಿ ಎಲ್ಲವನ್ನೂ ಬಿಟ್ಟು, ಅವರ ಆಸ್ತಿಯನ್ನೆಲ್ಲಾ ಮಾರಿ, ಈ ಮಗುವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಈ ಮಗುವಿನ ಖಾಯಿಲೆ ಬಗ್ಗೆ ಕಟ್ಟಡ ಕಾರ್ಮಿಕ ಸಂಘಟನೆಯವರಿಗೆ ಮಾಹಿತಿ ಬಂದ ತಕ್ಷಣ ತಮ್ಮ ಜಿಲ್ಲಾ ಸಂಘಟನೆಯ ಪ್ರಮುಖರಿಗೆ ಮಾಹಿತಿ ಮುಟ್ಟಿಸಿ ತಮ್ಮ ಸಂಘಟನೆಯ ಸದಸ್ಯರೇ ಸ್ವಯಂಪ್ರೇರಿತವಾಗಿ ದೇಣಿಗೆಯನ್ನು ಒಟ್ಟು ಮಾಡಿ ಆ ನಂತರದಲ್ಲಿ ಸ್ಥಳೀಯ ಠಾಣೆಯ ಪಿಎಸೈ ಪ್ರವೀಣ್ ಎಸ್ ಪಿ ಗಮನಕ್ಕೆ ತಂದಿದ್ದಾರೆ. ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಗಳಿಸಿರುವ ರಿಪ್ಪನ್ ಪೇಟೆ ಪಿಎಸೈ ಹಾಗೂ ಸಿಬ್ಬಂದಿಗಳು ತಮ್ಮ ಠಾಣೆ ವತಿಯಿಂದಲೂ ಸಹಾಯಧನವನ್ನು ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಗರ್ತಿಕೆರೆಯ ಸತೀಶ್ ಪೂಜಾರಿರವರಿಗೆ ಕಟ್ಟಡ ಕಾರ್ಮಿಕರ ಸಂಘ ಹಾಗೂ ಪೊಲೀಸ್ ಠಾಣೆ ವತಿಯಿಂದ ಸಂಗ್ರಹಿಸಿದ್ದ ದೇಣಿಗೆ ಹಣವನ್ನು ಡಿವೈಎಸ್ಪಿ ಅರವಿಂದ್ ಕರಗುಜ್ಜಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಅರವಿಂದ್ ಕರಗುಜ್ಜಿ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವ ಮಹತ್ಕಾರ್ಯಕ್ಕೆ ಇಲಾಖೆಯಿಂದ ಸದಾ ನೆರವು ನೀಡಲಾಗುವುದು ಎಂದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ ನಮ್ಮ ಕಟ್ಟಡ ಕಾರ್ಮಿಕರ ಸಂಘದ ಸಕ್ರೀಯ ಕಾರ್ಯಕರ್ತ ಸತೀಶ್ ಪೂಜಾರ ಮಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಲಕ್ಷಾಂತರ ರೂ ಅವಶ್ಯಕತೆ ಇದ್ದು ಸಂಘಟನೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸುಮಾರು ಎರಡು ಲಕ್ಷ ಸಹಾಯ ಮಾಡಿದ್ದೇವೆ ಚಿಕಿತ್ಸೆಗೆ ಇನ್ನೂ ಹ್ಱ್ಣ ಬೇಕಾಗಿದೆ ಹಾಗಾಗಿ ಸಾರ್ವಜನಿಕರು ತಮ್ಮ ಕೈಲಾದ ಸಹಾಯವನ್ನು ಮಾಡುವ ಮೂಲಕ ಮಗುವಿನ ಚಿಕಿತ್ಸೆಗೆ ನೆರವಾಗಬೇಕಾಗಿ ಕೇಳಿಕೊಂಡರು.

ಈ ಸಂಧರ್ಭದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ,ಗ್ರಾಪಂ ಉಪಾಧ್ಯಕ್ಷರದ ಸುಧೀಂದ್ರ ಪೂಜಾರಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷರಾದ ಸಂಜಯ್ ಕುಮಾರ್ , ಹೊಸನಗರ ತಾಲೂಕ್ ಅಧ್ಯಕ್ಷ ಮಹಮ್ಮದ್ ಹುಸೇನ್ , ಹುಂಚ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶಂಕರ್ ಆಚಾರ್ , ಪ್ರಭಾಕರ್ ಆಚಾರ್ , ರವೀಂದ್ರ ಕೆರೆಹಳ್ಳಿ , ಜಿ ಡಿ ಮಲ್ಲಿಕಾರ್ಜುನ್ ಹಾಗೂ ಇನ್ನಿತರರಿದ್ದರು.

ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಗಾರೆ ಕೆಲಸ ನಿರ್ವಹಿಸುವ ಬಡ ಕುಟುಂಬದ ಐದು ವರ್ಷದ ಮಗು ಆದ್ಯ ಳಿಗೆ ಅಪರೂಪದ ಖಾಯಿಲೆ ಬಂದೆರೆಗಿದ್ದು ಆಕೆಯ ಚಿಕಿತ್ಸೆಗೆ ಅವಳ ಪೋಷಕರು ಸಾಕಷ್ಟು ಹೋರಾಟ ನಡೆಸುತಿದ್ದಾರೆ.

ಈಗಾಗಲೇ ಪೊಲೀಸ್ ಇಲಾಖೆ ಹಾಗೂ ಕಟ್ಟಡ ಕಾರ್ಮಿಕರ ಸಂಘಟನೆ ತಮ್ಮ ಕೈಲಾದ ಆರ್ಥಿಕ ನೆರವು ನೀಡಿದ್ದು ಇನ್ನೂ ಲಕ್ಷಾಂತರ ರೂ ಹಣದ ಅವಶ್ಯಕತೆ ಇದೆ ಹಾಗಾಗಿ ಸಾರ್ವಜನಿಕರು ಹಾಗೂ ಸಹೃದಯಿಗಳು ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಬಡ ಕುಟುಂಬದ ನೆರವಿಗೆ ನಿಲ್ಲಬೇಕಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ‌ ಮಾಡಿಕೊಳ್ಳುತ್ತದೆ.

ಹೆಚ್ಚಿನ ಮಾಹಿತಿಗೆ ಈ ನಂಬರ್ ಗೆ ಕರೆ ಮಾಡಿ :

9480280780
9686898630

ಆದ್ಯಳ ತಾಯಿ ಅಮೃತ ರವರ ಬ್ಯಾಂಕ್ ಡಿಟೇಲ್ಸ್ :

AMRUTHA
account NUMBER : 40560110143
IFSC CODE : SBIN004174

ಫೋನ್ ಪೇ ನಂಬರ್ : 9686898630

ಗೂಗಲ್ ಪೇ ನಂಬರ್ : 9480280780

ಈ ಕೆಳಗಿನ ಮಗುವಿನ ತಂದೆ ಸತೀಶ್ ಆಚಾರ್ ರವರ ಕ್ಯೂ ಆರ್ ಕೋಡ್ ಬಳಸಿ ಸಹಾಯ ಮಾಡಿ :

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

4 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

17 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

18 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

21 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

22 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

22 hours ago