ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು.
ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು.
ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಪದವಿ ಓದುತಿದ್ದ ಯುವಕ ಕಾರ್ತಿಕ್ ಮೃತಪಟ್ಟಿದ್ದು, ಮೃತ ಯುವಕನ ತಂದೆ ಶಂಕರಪ್ಪರವರಿಗೆ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು.
ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಘಟನೆಯ ಹಿನ್ನಲೆ :
ರಿಪ್ಪನ್ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ 2024 ರ ಜುಲೈ ತಿಂಗಳಿನಲ್ಲಿ ನಡೆದಿತ್ತು.ಕಾರ್ತಿಕ್ ಎಸ್ (19) ಮೃತಪಟ್ಟಿದ್ದರು
ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿತ್ತು ಹಾಗಾಗಿ ಈ ದುರ್ಘಟನೆ ನಡೆದಿದೆ.ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದನು.
ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದರು.
MLA Belur Gopalakrishna distributed a compensation cheque to the family of a youth who died in an electrical accident.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…